ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣ ಸಾಮಾನ್ಯ ಸೆಲ್‌ಗೆ ಸ್ಥಳಾಂತರ

0
Prajwal-Revanna-750x545-1

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಐಪಿ ಸೆಲ್‌ನಿಂದ ಸಾಮಾನ್ಯ ಕೈದಿಗಳ ಸೆಲ್‌ಗೆ ಸ್ಥಳಾಂತರಿಸಲಾಗಿದೆ. ಜೈಲಿನೊಳಗಿಂದ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿರುವುದಾಗಿ ಹೇಳಲಾದ 17 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಾಳಿ ವೇಳೆ ಪ್ರಜ್ವಲ್ ಅವರ ಬ್ಯಾರಕ್‌ನಿಂದ ಮೊಬೈಲ್ ಫೋನ್, ಚಾರ್ಜರ್, ಪೆನ್‌ಡ್ರೈವ್ ಹಾಗೂ ಇತರ ವಸ್ತುಗಳು ಪತ್ತೆಯಾಗಿದ್ದವು ಎಂದು ಸುದ್ದಿಯಾಗಿವೆ. ಮೊಬೈಲ್‌ನಲ್ಲಿ ಹಲವು ಒಟಿಟಿ ಅಪ್ಲಿಕೇಶನ್‌ಗಳು ಕಂಡುಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೈಲು ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದು, ಪ್ರಜ್ವಲ್ ಅವರ ಬ್ಯಾರಕ್‌ನಿಂದ ಮೊಬೈಲ್ ಮತ್ತು ಚಾರ್ಜರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ, ಜೈಲಿನ ಕರ್ತವ್ಯದಲ್ಲಿದ್ದ ಸಹಾಯಕ ಸೂಪರಿಂಟೆಂಡೆಂಟ್ ಈರಣ್ಣ ಅವರನ್ನು ಅಮಾನತುಗೊಳಿಸಲಾಗಿದ್ದು, ಜೈಲು ಸೂಪರಿಂಟೆಂಡೆಂಟ್ ಅಂಶುಕುಮಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಈ ನಡುವೆ, ಮೊಬೈಲ್ ಪತ್ತೆಯಾದ ಬಳಿಕ ಪ್ರಜ್ವಲ್ ಅವರನ್ನು ಸುಮಾರು 20 ಮಂದಿ ಕೈದಿಗಳಿರುವ ಸಾಮಾನ್ಯ ಸೆಲ್‌ಗೆ ಸ್ಥಳಾಂತರಿಸಿ, ಜೈಲಿನ ಗ್ರಂಥಾಲಯದಲ್ಲಿ ಕಡ್ಡಾಯ ಸಮವಸ್ತ್ರ ಧರಿಸಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *