ಧಾರವಾಡ ಬಳಿ ಭೀಕರ ಕಾರು ಅಪಘಾತ; ದಾವಣಗೆರೆ ಜಿಲ್ಲೆಯ ಮೂವರು ಸಾವು

0
Accident-300x195-1

ಧಾರವಾಡ: ಧಾರವಾಡ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4ರ ವೆಂಕಟಾಪುರ ಗ್ರಾಮದ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ದಾವಣಗೆರೆ ಜಿಲ್ಲೆಯ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ವಿನಾಯಕ್ ಕೆ.ಯು. (25), ಮಂಜುನಾಥ್ (29) ಹಾಗೂ ಬಸವರಾಜ್ (34) ಎಂದು ಗುರುತಿಸಲಾಗಿದೆ. ಮೂವರೂ ದಾವಣಗೆರೆ ಜಿಲ್ಲೆಯ ನಿವಾಸಿಗಳಾಗಿದ್ದಾರೆ.

ಬೆಳಗಾವಿಯಿಂದ ಧಾರವಾಡದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೆಂಕಟಾಪುರ ಗ್ರಾಮದ ಬಳಿ ವಾಹನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿರುವ ಇತರ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಗರಗ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *