ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

0
Actress-Raveena-Tandon-300x199-1

ಮುಂಬೈ: ಬಾಲಿವುಡ್ ನಟಿ ರವೀನಾ ಟಂಡನ್ ಅವರ ತಾಯಿಯ ಮನೆಯಲ್ಲಿ ನಡೆದ ಸುಮಾರು ₹25 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.

ಬಂಧಿತೆಯನ್ನು ರಾಶಿ ಚಾಬ್ರಿಯಾ ಎಂದು ಗುರುತಿಸಲಾಗಿದ್ದು, ಆಕೆ ನಟಿಯ 86 ವರ್ಷದ ತಾಯಿಯ ಆರೈಕೆಗಾಗಿ ನೇಮಕಗೊಂಡಿದ್ದಳು. ಅಡುಗೆ ಕೆಲಸ ಸೇರಿದಂತೆ ದೈನಂದಿನ ಆರೈಕೆ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದ ವೇಳೆ ಮನೆಯ ಲಾಕರ್‌ನಲ್ಲಿದ್ದ ಚಿನ್ನಾಭರಣ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಕಳವು ಮಾಡಿರುವ ಆರೋಪ ಎದುರಿಸುತ್ತಿದ್ದಾಳೆ.

ಕಳ್ಳತನದ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ತನಿಖೆ ಆರಂಭಿಸಿದ ಪೊಲೀಸರು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ರಾಶಿ ಚಾಬ್ರಿಯಾಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಕಳವು ಪ್ರಕರಣದಲ್ಲಿ ಆಕೆಯ ಪಾತ್ರ ಬೆಳಕಿಗೆ ಬಂದಿರುವುದಾಗಿ ತಿಳಿದುಬಂದಿದೆ.

ಪೊಲೀಸರ ಪ್ರಕಾರ, ಬಂಧಿತೆಯಿಂದ ಸುಮಾರು 15 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಚಿನ್ನಾಭರಣ ಹಾಗೂ ಇತರೆ ವಸ್ತುಗಳ ಪತ್ತೆಗೆ ತನಿಖೆ ಮುಂದುವರಿದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

‘ತಲೈವರ್ 173’ಗೆ ಅಶ್ವಥ್ ಮಾರಿಮುತ್ತು ನಿರ್ದೇಶನ? ಆರ್‌ಕೆಎಫ್‌ಐ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ತಲೈವರ್ 173’ ಚಿತ್ರದ ನಿರ್ದೇಶಕರ ಕುರಿತು ಹೊಸ ಚರ್ಚೆ ಆರಂಭವಾಗಿದೆ. ನಟ ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ (ಆರ್‌ಕೆಎಫ್‌ಐ) ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಳಿಕ, ಈ ಚಿತ್ರವನ್ನು ಅವರೇ ನಿರ್ದೇಶಿಸಲಿದ್ದಾರೆ ಎಂಬ ವದಂತಿಗಳು ಸಿನಿ ವಲಯದಲ್ಲಿ ಹರಿದಾಡುತ್ತಿವೆ. ಆರ್‌ಕೆಎಫ್‌ಐ ತನ್ನ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ವಿಡಿಯೊ ಹಂಚಿಕೊಂಡು ಅಶ್ವಥ್ ಮಾರಿಮುತ್ತು ಅವರಿಗೆ ಶುಭಾಶಯ ಕೋರಿತ್ತು. ಈ ವಿಡಿಯೊದಲ್ಲಿನ ಕೆಲವು ಸೂಚನೆಗಳು ಅಭಿಮಾನಿಗಳಲ್ಲಿ ಹೊಸ ಕುತೂಹಲ ಮೂಡಿಸಿದ್ದು, ‘ತಲೈವರ್ 173’ ಚಿತ್ರದ ನಿರ್ದೇಶಕ ಅಶ್ವಥ್ ಅವರೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಈ ಚಿತ್ರವನ್ನು ಮೊದಲು ನಿರ್ದೇಶಕ ಸುಂದರ್ ಸಿ ನಿರ್ದೇಶಿಸಬೇಕಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಯೋಜನೆಯಿಂದ ಹಿಂದೆ ಸರಿದಿದ್ದರು. ಬಳಿಕ ನಿರ್ದೇಶಕ ಸಿಬಿ ಚಕ್ರವರ್ತಿ ಹೆಸರು ಕೇಳಿಬಂದಿದ್ದರೂ, ಅವರು ಸಹ ಯೋಜನೆಯಿಂದ ಹೊರಬಂದಿದ್ದಾರೆ ಎಂಬ ವರದಿಗಳು ಹರಿದಾಡಿದ್ದವು. ಈ ಬೆಳವಣಿಗೆಗಳ ನಡುವೆ ಅಶ್ವಥ್ ಮಾರಿಮುತ್ತು ಹೆಸರು ಮುನ್ನೆಲೆಗೆ ಬಂದಿದ್ದು, ಆರ್‌ಕೆಎಫ್‌ಐ ಪೋಸ್ಟ್ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ. ಆದರೆ ಈ ಕುರಿತು ನಿರ್ಮಾಣ ಸಂಸ್ಥೆ ಅಥವಾ ಚಿತ್ರತಂಡದಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಕಮಲ್ ಹಾಸನ್ ನಿರ್ಮಿಸುತ್ತಿರುವ ಹಾಗೂ ರಜನಿಕಾಂತ್ ಅಭಿನಯಿಸಲಿರುವ ‘ತಲೈವರ್ 173’ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದ್ದು, ನಿರ್ದೇಶಕರ ಆಯ್ಕೆ ಕುರಿತು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

‘ತಲೈವರ್ 173’ಗೆ ಅಶ್ವಥ್ ಮಾರಿಮುತ್ತು ನಿರ್ದೇಶನ? ಆರ್‌ಕೆಎಫ್‌ಐ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ತಲೈವರ್ 173’ ಚಿತ್ರದ ನಿರ್ದೇಶಕರ ಕುರಿತು ಹೊಸ ಚರ್ಚೆ ಆರಂಭವಾಗಿದೆ. ನಟ ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ (ಆರ್‌ಕೆಎಫ್‌ಐ) ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಳಿಕ, ಈ ಚಿತ್ರವನ್ನು ಅವರೇ ನಿರ್ದೇಶಿಸಲಿದ್ದಾರೆ ಎಂಬ ವದಂತಿಗಳು ಸಿನಿ ವಲಯದಲ್ಲಿ ಹರಿದಾಡುತ್ತಿವೆ. ಆರ್‌ಕೆಎಫ್‌ಐ ತನ್ನ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ವಿಡಿಯೊ ಹಂಚಿಕೊಂಡು ಅಶ್ವಥ್ ಮಾರಿಮುತ್ತು ಅವರಿಗೆ ಶುಭಾಶಯ ಕೋರಿತ್ತು. ಈ ವಿಡಿಯೊದಲ್ಲಿನ ಕೆಲವು ಸೂಚನೆಗಳು ಅಭಿಮಾನಿಗಳಲ್ಲಿ ಹೊಸ ಕುತೂಹಲ ಮೂಡಿಸಿದ್ದು, ‘ತಲೈವರ್ 173’ ಚಿತ್ರದ ನಿರ್ದೇಶಕ ಅಶ್ವಥ್ ಅವರೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಈ ಚಿತ್ರವನ್ನು ಮೊದಲು ನಿರ್ದೇಶಕ ಸುಂದರ್ ಸಿ ನಿರ್ದೇಶಿಸಬೇಕಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಯೋಜನೆಯಿಂದ ಹಿಂದೆ ಸರಿದಿದ್ದರು. ಬಳಿಕ ನಿರ್ದೇಶಕ ಸಿಬಿ ಚಕ್ರವರ್ತಿ ಹೆಸರು ಕೇಳಿಬಂದಿದ್ದರೂ, ಅವರು ಸಹ ಯೋಜನೆಯಿಂದ ಹೊರಬಂದಿದ್ದಾರೆ ಎಂಬ ವರದಿಗಳು ಹರಿದಾಡಿದ್ದವು. ಈ ಬೆಳವಣಿಗೆಗಳ ನಡುವೆ ಅಶ್ವಥ್ ಮಾರಿಮುತ್ತು ಹೆಸರು ಮುನ್ನೆಲೆಗೆ ಬಂದಿದ್ದು, ಆರ್‌ಕೆಎಫ್‌ಐ ಪೋಸ್ಟ್ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ. ಆದರೆ ಈ ಕುರಿತು ನಿರ್ಮಾಣ ಸಂಸ್ಥೆ ಅಥವಾ ಚಿತ್ರತಂಡದಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಕಮಲ್ ಹಾಸನ್ ನಿರ್ಮಿಸುತ್ತಿರುವ ಹಾಗೂ ರಜನಿಕಾಂತ್ ಅಭಿನಯಿಸಲಿರುವ ‘ತಲೈವರ್ 173’ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದ್ದು, ನಿರ್ದೇಶಕರ ಆಯ್ಕೆ ಕುರಿತು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.