ಇನ್ನೆರಡು ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ; ಕೇಜ್ರಿವಾಲ್ ಘೋಷಣೆ

Arvind-Kejriwal-300x165

ನವದೆಹಲಿ: ಇನ್ನೇರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂಧ ಕೇಜ್ರಿವಾಲ್ ಪ್ರಕಟಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರು ತಿಂಗಳ ಸೆರೆವಾಸದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ಮಹತ್ವದ ಘೋಷಣೆ ಮಾಡಿದರು.

ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಎರಡು ದಿನಗಳ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದರು. ಮತ್ತೆ ಜನರ ಆಶೀರ್ವಾದ ಸಿಗುವವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವುದಿಲ್ಲ ಎಂದರು.

ಕಾನೂನು, ನ್ಯಾಯಾಲಯದಿಂದ ನನಗೆ ನ್ಯಾಯ ಸಿಕ್ಕಿದೆ ಎಂದ ಅರವಿಂದ್ ಕೇಜ್ರಿವಾಲ್, ಈಗ ಜನತಾ ನ್ಯಾಯಾಲಯದಿಂದ ನ್ಯಾಯ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

You may have missed