ಕೊರೋನಾ ತಲ್ಲಣ: ರಾಜ್ಯದಲ್ಲಿ ಮತ್ತೆ 33 ಸೋಂಕಿನ ಪ್ರಕರಣಗಳು ಪತ್ತೆ
ಬೆಂಗಳೂರು: ಕೆಲವು ವರ್ಷಗಳ ಹಿಂದೆ ತಲ್ಲಣ ಸೃಷ್ಟಿಸಿದ್ದ ಕೊರೋನಾ ವೈರಸ್ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಕೊರೊನಾ ವೈರಸ್ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದೆ. ಸಿಂಗಾಪುರ, ಹಾಂಕಾಂಗ್ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿದೆ.
ಕರ್ನಾಟಕದಲ್ಲಿ ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ಈ ತಿಂಗಳಲ್ಲಿ 33 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎನ್ನಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ 16 ಸಕ್ರಿಯ ಪ್ರಕರಣಗಳಿವೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಭಾರತದಲ್ಲಿ ಸದ್ಯ ಸಕ್ರಿಯ ಕೊವಿಡ್ ಕೇಸ್ಗಳ ಸಂಖ್ಯೆ 257 ಇದೆ ಎನ್ನಲಾಗಿದ್ದು, ಆಸ್ಪತ್ರೆಗಳಲ್ಲಿ ಇನ್ಫ್ಲುಯೆಂಜಾ ಮಾದರಿ ಅನಾರೋಗ್ಯ ಮತ್ತು ತೀವ್ರವಾದ ಉಸಿರಾಟದ ಸೋಂಕುಗಳ ಪ್ರಕರಣಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ.