ಗಣಿ ಕೇಸಿನಲ್ಲಿ 7 ವರ್ಷ ಶಿಕ್ಷೆಗೊಳಗಾಗಿರುವ ಜನಾರ್ಧನ ರೆಡ್ಡಿ ಶಾಸಕ ಸ್ಥಾನಕ್ಕೂ ಸಂಚಕಾರ

0
janardhana reddy

ಬೆಂಗಳೂರು: ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಮತ್ತೆ ಜೈಲು ಸೇರಿದ್ದಾರೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಪರಾಧಿಯಾಗು ಶಿಕ್ಷೆಗೆ ಗುರಿಯಾಗಿರುವ ಶಾಸಕ ಜನಾರ್ಧನ ರೆಡ್ಡಿ ಅವರ ಶಾಸಕ ಸ್ಥಾನಕ್ಕೂ ಕಂಟಕ ಎದುರಾಗಿದೆ.

884 ಕೋಟಿ ರೂಪಾಯಿ ಅಕ್ರಮಆರೋಪದಲ್ಲಿ ಸಿಬಿಐ ಕೋರ್ಟ್‌, ಮಾಜಿ ಸಚಿವರೂ ಆದ ಜನಾರ್ಧನ ರೆಡ್ಡಿಯನ್ನುದೋಷಿ ಎಂದು ಮಂಗಳವಾರ ತೀರ್ಪು ನೀಡಿದೆ. 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದ್ದು ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜನಾರ್ದನ ರೆಡ್ಡಿ ಅವರು ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದಾರೆ. ಈ ಬಗ್ಗೆ ರೆಡ್ಡಿ ಪರ ವಕೀಲರು, ವಯಸ್ಸು ಮತ್ತು ಸೇವೆಯನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ಮನವಿ ಮಾಡಿದ್ದಾರೆ. ಸಿಬಿಐ ಈ ಮನವಿಯನ್ನು ತಿರಸ್ಕರಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.

ಈ ನಡುವೆ, ಸಿಬಿಐ ಕೋರ್ಟ್ ನೀಡಿರುವ ತೀರ್ಪಿನಿಂದಾಗಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನಕ್ಕೂ ಸಂಚಕಾರ ಎದುರಾಗಿದೆ.ಈ ತೀರ್ಪನ್ನು ಪ್ರಶ್ನಿಸಿ ಅವರು ಮೇಲ್ಮನವಿ ಸಲ್ಲಿಸಬೇಕಿದ್ದು, ಜೈಲು ಶಿಕ್ಷೆಯ ತೀರ್ಪಿಗೆ ಹೈಕೋರ್ಟ್​​ನಿಂದ ತಡೆ ಸಿಕ್ಕರಷ್ಟೇ ಅವರು ನಿರಾಳರಾಗಬಹುದು ಎಂದು ತಜ್ಞರು ಹೇಳುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed