ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

0
Ex MLC-Ramesh Babu

ಬೆಂಗಳೂರು: ಸಾರ್ವಜನಿಕ ಜೀವನದಲ್ಲಿ ಸೈದ್ಧಾಂತಿಕವಾಗಿ ಎದುರಿಸಲಾಗದ ಪಲಾಯನವಾದಿಗಳು ವಾಮಮಾರ್ಗದಲ್ಲಿ ರಾಜಕೀಯ ಎದುರಾಳಿಗಳ ಮೇಲೆ ಕೆಸರು ಎರಚುವ ಪ್ರಯತ್ನ ಮಾಡುತ್ತಾರೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.

ತೇಜಸ್ ಎ ಗೌಡ ಎಂಬ ವ್ಯಕ್ತಿ ಸುಳ್ಳು ಆರೋಪಗಳನ್ನು ಮಾಡಿ ನನ್ನ ತೇಜೋವದೆ ಮಾಡುವ ದುರುದ್ದೇಶದಿಂದ ಮುಕ್ತಾಯಗೊಂಡಿರುವ ಪ್ರಕರಣಗಳ ಉಲ್ಲೇಖ ಮಾಡಿ ಮತ್ತು ನ್ಯಾಯಾಲಗಳ ಆದೇಶಕ್ಕೆ ವಿರುದ್ಧವಾಗಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇವರ ಪ್ರಯತ್ನದ ಹಿಂದೆ ಸುಳ್ಳು ದೂರುಗಳ ಮುಖಾಂತರ ಹಣ ಮಾಡುವ ದುರುದ್ದೇಶವೂ ಇರುವಂತಿದೆ. ಇಂತಹ ಸುಳ್ಳು ದೂರುಗಳ ಮೇಲೆ ಅನೇಕ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ ಎಂದು ರಮೇಶ್ ಬಾಬು ಪ್ರತಿಕ್ರಿಯಿದ್ದಾರೆ.

ಇವರ ದುರುದ್ದೇಶಪೂರಿತ ಮತ್ತು ಸುಳ್ಳು ಸುದ್ದಿಯ ಆರೋಪಗಳ ಮೇಲೆ ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲೆಗಳ ಸಮೇತ ತಾನು ದೂರು ನೀಡಿದ್ದು, ಮುಂದಿನ ಕ್ರಮಕ್ಕಾಗಿ ಪೋಲಿಸರು ದೂರನ್ನು ದಾಖಲಿಸಿಕೊಂಡಿದ್ದಾರೆ ಎಂದವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ಸುಳ್ಳು ಆರೋಪಗಳನ್ನು ಮಾಡಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಪಲಾಯನ ಮಾಡಲು ಸಾಧ್ಯವಿಲ್ಲ. ಕೆಲವರು ತೇಜೋವದೆಯ ದುರುದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಆರೋಪಗಳ ಮೇಲೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತಿದ್ದೇನೆ ಎಂದು ರಮೇಶ್ ಬಾಬು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಪರವಾಗಿ ಕಾಲ್ತುಳಿತದ ಪ್ರಕರಣದಲ್ಲಿ ಹಿಂದಿನ ಘಟನೆಗಳಿಗೆ ನಾನು ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವಾಗದೆ, ಇಂತಹ ಅಪಪ್ರಚಾರಕ್ಕೆ ಕೆಲವರು ಮುಂದಾಗಿದ್ದು, ಹಿಟ್ ಅಂಡ್ ರನ್ ಮನೋಭಾವದವರಿಗೆ ಕಾನೂನಿನ ಮೂಲಕವೇ ಉತ್ತರ ನೀಡಲಾಗುವುದು. ಈಗಾಗಲೇ ಬೆಂಗಳೂರು ಮಹಾನಗರದ ಪೊಲೀಸ್ ಆಯುಕ್ತರಿಗೆ ಪ್ರದೇಶ ಕಾಂಗ್ರೆಸ್ ಪಕ್ಷದ ಪರವಾಗಿ ದೂರನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವಾರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed