ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

0
Drown-In-River-death-750x487-1-300x195-2

ಮಂಡ್ಯ: ಫೋಟೋ ತೆಗೆಯುವ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿ ಸಮೀಪ ನಡೆದಿದೆ.

ಮಳವಳ್ಳಿ ತಾಲ್ಲೂಕಿನ ಮುತ್ತುರಾಯ ಸ್ವಾಮಿ ದೇವಾಲಯಕ್ಕೆ ಕುಟುಂಬ ಸದಸ್ಯರು ಭೇಟಿ ನೀಡಿದ್ದರು. ದೇವಾಲಯ ದರ್ಶನದ ಬಳಿಕ ಕಾವೇರಿ ನದಿ ತೀರದಲ್ಲಿ ನಿಂತು ಫೋಟೋ ತೆಗೆಯುವ ಸಂದರ್ಭದಲ್ಲಿ ಅಜಾಗರೂಕತೆಯಿಂದ ನೀರಿನಲ್ಲಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ.

ಮೃತರನ್ನು ಚನ್ನಪಟ್ಟಣ ಮೂಲದ ವಿಜಯಮ್ಮ, ಚೈತ್ರ, ಶ್ವೇತಾ, ಪ್ರಿಯಾಂಕ ಹಾಗೂ ಮಹೇಶ್ ಎಂದು ಗುರುತಿಸಲಾಗಿದೆ.


ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ.

ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮುತ್ತತ್ತಿ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಕುರಿತು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *