ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅನರ್ಹ: ವಿಧಾನಸಭೆಯ ಕಾರ್ಯದರ್ಶಿ ಆದೇಶ

0
janardhana reddy 1

ಬೆಂಗಳೂರು: ಗಣಿ ಅಕ್ರಮದಲ್ಲಿ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಸಿಬಿಐ ಕೋರ್ಟ್‌ ಶಿಕ್ಷೆ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗಿದ್ದಾರೆ. ಅದೇ ಸಂದರ್ಭದಲ್ಲಿ ಜನಪ್ರತಿನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನಾರ್ಧನ ರೆಡ್ಡಿ ಅವರ ಶಾಸನ ಸಭೆಯ ಸದಸ್ಯತ್ವ ರದ್ದಾಗಿದೆ. .

ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅವರ ಶಿಕ್ಷೆಗೆ ಹೈಕೋರ್ಟ್ ತಾನೇ ನೀಡದ ಹೊರತು, ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ.

Leave a Reply

Your email address will not be published. Required fields are marked *

You may have missed