ಮುಡಾ ಹಗರಣ: ಜಿಟಿ ದೇವೇಗೌಡ ವಿರುದ್ಧವೂ ಲೋಕಾಯುಕ್ತಕ್ಕೆ ದೂರು

0
Police-Crime-Arreat-1-300x170 (1)

ಮೈಸೂರು: ಮುಡಾ ಹಗರಣ ಆರೋಪದಲ್ಲಿ ಇದೀಗ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ವಿರುದ್ದವೂ ದೂರು ದಾಖಲಾಗಿದೆ. ಶಾಸಕ ಜಿಟಿ ದೇವೇಗೌಡ ಹಾಗೂ ಪುತ್ರ ಹರೀಶ್ ಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಸರ್ವೇ ನಂಬರ್ 81/2 ರಲ್ಲಿ 2.22 ಎಕರೆ ಜಮೀನಿಗೆ ಪರಿಹಾರ ನೀಡಿಲ್ಲ ಎಂದು 19 ನಿವೇಶನ ಪಡೆದಿರುವ ಬಗ್ಗೆ ಜಿ.ಟಿ.ದೇವೇಗೌಡ ಬಗ್ಗೆ ಆರೋಪ ಕೇಳಿಬಂದಿದೆ. ಶಾಸಕ ಜಿಟಿ ದೇವೇಗೌಡರಿಂದ ಅಧಿಕಾರ ದುರುಪಯೋಗವಾಗಿದೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಮಂಗಳವಾರ ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಅವರು ದೂರು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You may have missed