ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರ; ಕರಾವಳಿ, ಮಲೆನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್

0
udupi rain1

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮುಂಗಾರು ಮಳೆಯ ಅಬ್ಬರ. ಮೂರು ದಿನಗಳಲ್ಲಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಿರುಗಾಳಿಯೊಡನೆ ಮಳೆ ಸುರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜನತೆಗೆ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಅಲ್ಲದೆ, ಪ್ರವಾಹಕ್ಕೆ ಸಾದರವಾದ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆ ನಿರೀಕ್ಷೆಯಿದೆ. ಆದರೆ ಕೆಲವು ಸ್ಥಳಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆಯಿರುವುದರಿಂದ ಅಲ್ಲಿ ಸಹ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.

ಹವಾಮಾನ ವೈಪರಿತ್ಯದಿಂದಾಗಿ ಜನಜೀವನಕ್ಕೆ ಅಡ್ಡಿಯುಂಟಾಗುವ ಸಾಧ್ಯತೆ ಇದ್ದು, ರೈತರು ಹಾಗೂ ಪ್ರವಾಸಿಗರಿಗೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *