ರಾಜ್ಯದ ಅಭಿವೃದ್ಧಿಗೆ ಹೆಚ್ಡಿಕೆ ನೀಡಿರುವ ಕೊಡುಗೆ ಶೂನ್ಯ; ಕಾರು ತಕರಾರು ಬಗ್ಗೆ ಕಾಂಗ್ರೆಸ್ ಟೀಕೆ

0
hdk kumaraswamy

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರಾದ ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿರವರು ಕರ್ನಾಟಕ ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿರುತ್ತಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದು ಆರು ತಿಂಗಳು ಕಳೆದರೂ ಇಲ್ಲಿಯವರೆಗೆ ರಾಜ್ಯದ ಅಭಿವೃದ್ಧಿಗೆ ಇವರು ನೀಡಿರುವ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ.

ರಮೇಶ್ ಬಾಬು, ವಿಧಾನಪರಿಷತ್ ಮಾಜಿ ಸದಸ್ಯರು

ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ಮಾಸದ ಕಾರಣ ನೀಡಿ ಸಂಕ್ರಾಂತಿ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿರುತ್ತಾರೆ. ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 04-11-2024 ರಲ್ಲಿ ಹೆಚ್.ಡಿ.ಕುಮಾರಸ್ವಾಮಿರವರ ಹೊಸ ವಾಹನದ ಪ್ರಸ್ತಾಪಕ್ಕೆ ಅನುಗುಣವಾಗಿ ಆರ್ಥಿಕ ಇಲಾಖೆಗೆ ಪತ್ರ ಬರೆದಿರುತ್ತಾರೆ. ಕರ್ನಾಟಕದ ಸುಮಾರು 6 ಸಂಸದರಿಗೆ ಆರ್ಥಿಕ ಮಿತಿಯೊಳಗೆ ವಾಹನಗಳನ್ನು ಖರೀದಿಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಅದಕ್ಕೆ ಅನುಗುಣವಾಗಿ ವಾಹನ ಖರೀದಿ ಮಾಡಿ, ಹೊಸ ಕಾರು ಪಡೆಯಲು ಮಾಹಿತಿ ನೀಡಲಾಗಿರುತ್ತದೆ ಎಂದು ರಮೇಶ್ ಬಾಬು ಅವರು ಹೆಚ್ಡಿಕೆ ಅವರ ಕಾರು ತಕರಾರು ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಹಿಂದಿನ ಇನ್ನೋವಾ ಕ್ರಿಸ್ಟಾ ಕಾರನ್ನು ಬಳಸಲು ಹೆಚ್.ಡಿ. ಕುಮಾರಸ್ವಾಮಿರವರು ನಿರಾಕರಿಸಿ ಹೊಸ ಇನ್ನೋವಾ ಹೈಕ್ರಾಸ್ ಕಾರಿಗೆ ಬೇಡಿಕೆ ಸಲ್ಲಿಸಿದ್ದು, KA 59 G 0099 ಕಾರು ಹಂಚಿಕೆ ಆಗಿದೆ. ಇದರ ಜೊತೆಗೆ ಕೆಲವು ಸಿಬ್ಬಂದಿಯನ್ನು ಎರವಲು ಸೇವೆಯ ಮೇಲೆ ರಾಜ್ಯ ಸರ್ಕಾರದಿಂದ ಪಡೆದುಕೊಂಡಿರುತ್ತಾರೆ. ಆದರೆ ಇಂತಹ ವಿಚಾರಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರವನ್ನು, ಸಿದ್ದರಾಮಯ್ಯರನ್ನು, ಡಿ.ಕೆ.ಶಿವಕುಮಾರ್ ರನ್ನು, ಕೃಷ್ಣ ಬೈರೇಗೌಡರನ್ನು, ಚೆಲುವರಾಯ ಸ್ವಾಮಿ ಮತ್ತು ಇತರರನ್ನು ಟೀಕಿಸುವ ಮೂಲಕ ತಮ್ಮ ನಾಯಕತ್ವಕ್ಕೆ ಅವರೇ ಮಸಿ ಬಳೆದುಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಿಸಿರುವ ಮಾಜಿ ಶಾಸಕರೂ ಆದ ರಮೇಶ್ ಬಾಬು, 2023ರ ವಿಧಾನಸಭೆಯ ಚುನಾವಣೆ ಫಲಿತಾಂಶದ ನಂತರ ಹೆಚ್.ಡಿ.ಕುಮಾರಸ್ವಾಮಿ ಪದೇ ಪದೇ ವ್ಯಕ್ತಿಗತ ಟೀಕೆಗಳಿಗೆ ಮುಂದಾಗುವ ಮೂಲಕ ಹತಾಶ ಭಾವನೆಯನ್ನು ತೋರುತ್ತಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮಗೆ ದೊರೆತಿರುವ ಅವಕಾಶಗಳನ್ನು ಬಳಸಿಕೊಂಡು ರಾಜ್ಯದ ಅಭಿವೃದ್ಧಿಗೆ ಮುಂದಾಗಲಿ. ಇಂತಹ ಸಾರ್ವಜನಿಕ ಪ್ರಾಮುಖ್ಯತೆ ಇಲ್ಲದ ವಿಷಯಗಳನ್ನು ಪ್ರಸ್ತಾಪಿಸಿ ಮುಜುಗರಕ್ಕೆ ಒಳಗಾಗುವ ಬದಲು, ಆರೋಗ್ಯಕರ ಚರ್ಚೆಗಳಿಗೆ ಒತ್ತು ನೀಡಿ ರಾಜ್ಯದ ಅಭಿವೃದ್ಧಿಗೆ ಮುಂದಾಗಲಿ ಎಂದು ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed