ಸಣ್ಣ ವ್ಯಾಪಾರಿಗಳಿಗೆ ನೀಡಿದ್ದ ಜಿಎಸ್‌ಟಿ ನೋಟಿಸ್ ತಕ್ಷಣ ಹಿಂಪಡೆಯಬೇಕು; ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

0
B.Y.Vijayendra

ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಖಜಾನೆ ತುಂಬಿಸುವ ಹೊಣೆಗಾರಿಕೆಯನ್ನು ವಹಿಸಿಕೊಂಡಿರುವ ವಾಣಿಜ್ಯ ತೆರಿಗೆ ಇಲಾಖೆ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೂ ಜಿಎಸ್‌ಟಿ ನೋಟಿಸ್ ನೀಡಿರುವುದು ಆತಂಕಕರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹಾರಾಷ್ಟ್ರವನ್ನು ಹಿಂದಿಕ್ಕಿ ಕರ್ನಾಟಕ ಜಿಎಸ್‌ಟಿ ಸಂಗ್ರಹದಲ್ಲಿ ಮೊದಲ ಸ್ಥಾನಕ್ಕೆ ಬರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಟಾರ್ಗೆಟ್ ನೀಡಿದ್ದರು. ಅದೇನೂ ತೀವ್ರವಾಗಿ ವ್ಯಾಪಾರಿಗಳಿಗೆ ನೋಟಿಸ್‌ಗಳ ರೂಪದಲ್ಲಿ ಸ್ಪಷ್ಟವಾಗುತ್ತಿದೆ” ಎಂದರು.

ಸಣ್ಣ ವ್ಯಾಪಾರಿಗಳ ಮೇಲೂ ತೆರಿಗೆ ಹೊರೆ ಬೀಳುತ್ತಿದೆ ಎಂದು ದೂರಿ, ಹಾಲು, ಮೊಸರು ಮಾರಾಟ ಮಾಡುವವರಿಗೂ ನೋಟಿಸ್ ನೀಡಿರುವುದನ್ನು ಖಂಡಿಸಿದ ಅವರು, “ಮೂರು ಜಿಎಸ್‌ಟಿ ಸ್ಲ್ಯಾಬ್‌ಗಳಿದ್ದರೂ ಎಲ್ಲರಿಗೂ ಶೇಕಡಾ 18ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಇದು ನಿರ್ದಾಕ್ಷಿಣ್ಯ ಕ್ರಮ” ಎಂದರು.

ಈ ನೋಟಿಸ್‌ಗಳನ್ನು ಪರಿಶೀಲಿಸದೆಯೇ ನೀಡಲಾಗುತ್ತಿದ್ದು, ಇದೀಗ ವ್ಯಾಪಾರಿಗಳ ಮೇಲೆ ಹಣದ ಒತ್ತಡ ತಂದಿರುವುದಾಗಿ ಅವರು ಆರೋಪಿಸಿದರು. ‘ಇವುಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಲ್ಲದಿದ್ದರೆ ಬಿಜೆಪಿ ವ್ಯಾಪಾರಿಗಳ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡುತ್ತದೆ’ ಎಂದು ಎಚ್ಚರಿಸಿದರು.

Leave a Reply

Your email address will not be published. Required fields are marked *