ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

0
parappana-agrahara-jail

ಬೆಂಗಳೂರು: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮೊದಲ ಹಂತದಲ್ಲಿ 45 ಪ್ರಕರಣಗಳನ್ನು ಪರಿಶೀಲಿಸಲಾಗಿದ್ದು, ಈ ಪೈಕಿ 28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಬಳಿಕ ಮತ್ತೊಂದು ಪ್ರಕರಣಕ್ಕೆ ಕೇಂದ್ರ ಗೃಹ ಸಚಿವಾಲಯದ ಅನುಮೋದನೆ ದೊರೆತಿದ್ದು, ಒಟ್ಟು 29 ಜೀವಾವಧಿ ಶಿಕ್ಷಾ ಕೈದಿಗಳು ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿದ್ದಾರೆ.

ಕೈದಿಗಳು ಜೈಲಿನಲ್ಲಿ ಕಳೆದಿರುವ ಅವಧಿ, ಅವರ ನಡವಳಿಕೆ ಹಾಗೂ ನಿಗದಿತ ಮಾನದಂಡಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸಚಿವ ಸಂಪುಟದ ನಿರ್ಧಾರವನ್ನು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗಿದೆ. ರಾಜ್ಯಪಾಲರ ಅಂತಿಮ ಅಂಕಿತ ದೊರೆತ ಬಳಿಕ ಅರ್ಹ ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *