ಹೆಚ್ಡಿಕೆ ಬಗ್ಗೆ ಜನಾಂಗೀಯ ನಿಂದನೆ ಆರೋಪ; ಸಚಿನ ಜಮೀರ್ ತಲೆದಂಡಕ್ಕೆ ಜೆಡಿಎಸ್ ಒತ್ತಾಯ

0
mla-zameer-ahmed-300x179

ಬೆಂಗಳೂರು: ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮೈಬಣ್ಣದ ಕಾರಣಕ್ಕಾಗಿ ನಿಂದಿಸಿರುವ ಆರೋಪಕ್ಕೆ ಗುರಿಯಾಗಿರುವ ಸಚಿವ ಜಮೀರ್‌ ಅಹ್ಮದ್‌ ರಾಜೀನಾಮೆ ನೀಡಬೇಕೆಂದು ಜೆಡಿಎಸ್ ಆಗ್ರಹಿಸಿದೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಜೆಡಿಎಸ್ ಪಕ್ಷವು ಸಚಿವ ಜಮೀರ್‌ ಅಹ್ಮದ್‌ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಹೆಚ್‌.ಡಿ. ಕುಮಾರಸ್ವಾಮಿ ಅವರು ಜಾತಿ, ಪಂಥ ಮತ್ತು ಬಣ್ಣದಿಂದ ಜನನಾಯಕರಾಗಿ ಬೆಳೆದಿಲ್ಲ. ಅವರ ನಾಯಕತ್ವ ಗುಣ, ಸಮಾಜಕ್ಕೆ ಮತ್ತು ಸಮುದಾಯಗಳ ಅಭಿವೃದ್ಧಿಗೆ ಕೊಟ್ಟಿರುವ ಕೊಡುಗೆಗಳು, ಜನಪರ ಯೋಜನೆಗಳು ಮತ್ತು ಉತ್ತಮವಾದ ಆಡಳಿತ ಮತ್ತು ಆರ್ಥಿಕ ಅಭಿವೃದ್ಧಿ ದೃಷ್ಟಿಕೋನದಿಂದಲೇ ಉತ್ತಮ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ಜೆಡಿಎಸ್ ಎದಿರೇಟು ನೀಡಿದೆ.

ಸರ್ವಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ನೀವು ಕ್ಷುಲ್ಲಕ ರಾಜಕೀಯಕ್ಕಾಗಿ ದ್ವೇಷ ಹರಡಲು, ಒಡೆದು ಹಾಳುವ ನೀತಿಯನ್ನು ಅನುಸರಿಸುತ್ತಿದ್ದೀರಿ. ನೆನಪಿರಲಿ ಇಲ್ಲಿ, ನಿಮ್ಮ ಒಡೆದು ಹಾಳುವ ನೀತಿಗೆ ಜಾಗವಿಲ್ಲ. ಜನಾಂಗೀಯ ನಿಂದನೆ, ವರ್ಣಭೇದ ಹೇಳಿಕೆಗಳನ್ನು ನೀಡಿ ಅಪಮಾನ ಎಸಗಿರುವ ನೀವು ನಾಡಿನ ಜನರಲ್ಲಿ ಕ್ಷಮೆಯಾಚಿಸಿ, ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಪಕ್ಷ ಬರೆದುಕೊಂಡಿದೆ.

Leave a Reply

Your email address will not be published. Required fields are marked *

You may have missed