ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಲ್ಲೇಟು; ಸವಾಲಾದ ಪುಂಡರ ಕಾಟ

KERALA - VANDE BHARAT TRAIN

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಯುವಕರ ಗುಂಪು ಪುಂಡಾಟ ಪ್ರದರ್ಶಿಸಿದೆ. ಚಲಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಬುಧವಾರ ಕಿಡಿಗೇಡಿಗಳು ಕೆಲ್ಲೆಸೆದು ಕಿಟಕಿಯೊಂದಕ್ಕೆ ಹಾನಿ ಮಾಡಿದ್ದಾರೆ. ಮಂಗಳೂರು-ಚೆನ್ನೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ನೇತ್ರಾವತಿ ಎಕ್ಸ್‌ಪ್ರೆಸ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಬುಧವಾರ ಮತ್ತೊಂದು ದಾಳಿ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ಮರುಕಳಿಸುತ್ತಲೇ ಇದ್ದು, ಕಣ್ಣೂರು ಸಮೀಪ ಎರಡು ರೈಲುಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಸರಗೋಡಿನಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ವಟಕರ ಎಂಬಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ. ಪುಂಡರು ಈ ಕಲ್ಲು ತೂರಾಟ ನಡೆಸಿದ್ದು ಕಿಟಕಿಗೆ ಹಾನಿಯಾಗಿದೆ. ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

You may have missed