ಕಾವೇರಿ ಕಿಚ್ಚು; ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್

ಬೆಂಗಳೂರು: ಕಾವೇರಿ ವಿಚಾರದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಾ ರಕ್ತ ಕೊಟ್ಟೆವು ನೀರು ಬಿಡೆವು ಎಂದು ಘೋಷಣೆ ಮೊಳಗಿಸುತ್ತಿದ್ದರೆ, ಇನ್ನೊಂದೆಡೆ ‘ನೆನಪಿರಲಿ’ ಸಿನಿಮಾ ಖ್ಯಾತಿಯ ನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕರ್ನಾಟಕಕ್ಕೆ ದಯವಿಟ್ಟು ನ್ಯಾಯ ಕೊಡಿ ಎಂದು ರಕ್ತದಲ್ಲಿ ಬರೆದ ಪತ್ರದಲ್ಲಿ ಹಸ್ತದ ಅಚ್ಚನ್ನು ನಮೂದಿಸಿದ್ದಾರೆ. ಈ ಪತ್ರವನ್ನು ನಟ ಪ್ರೇಮ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

You may have missed