ಬಿಜೆಪಿ ರಾಜ್ಯಾದ್ಯಕ್ಷರ ನೇಮಕ ವಿಳಂಬ; ವರಿಷ್ಠರ ಬಗ್ಗೆ ಡಿವಿಎಸ್ ಅಸಮಾಧಾನ

dv sadananda gowda

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ವಿಳಂಬ ಬಗ್ಗೆ ಸಂಸದ ಡಿ.ವಿ.ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕರ ನೇಮಕ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಯಾವ ಸಂದರ್ಭದಲ್ಲಿ ಏನು ಆಗಬೇಕಿತ್ತೋ ಆಗಿಲ್ಲ. ಇದು ಕಾರ್ಯಕರ್ತರ ಮೇಲೆ ಪ್ರಭಾವ ಬೀರಿದೆ. ಏನಪ್ಪ ನಮ್ಮ ಪಕ್ಷದಲ್ಲಿ ಹೀಗಾಯಿತು ಎಂಬ ಬೇಸರ ಇದೆ ಎಂದರು.

ಆದಷ್ಟು ಬೇಗ ಈ ಪ್ರಕ್ರಿಯೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಡಿವಿಎಸ್, ಹೈಕಮಾಂಡ್‌ ಶೀಘ್ರವೇ ನೇಮಕ ಮಾಡುವಂತೆ ಈಗಲೂ ಮನವಿ ಮಾಡುತ್ತೇನೆ ಎಂದರು.

ಸೋತ ಮೇಲೆ ಬಿಜೆಪಿ ರಾಜ್ಯ ನಾಯಕರ ಜತೆ ಚರ್ಚೆಯಾಗುತ್ತಿಲ್ಲ ಎಂಬ ಸಣ್ಣ ನೋವಿದೆ. ರಾಷ್ಟ್ರೀಯ ವಿಚಾರದ ಬಗ್ಗೆ ತೀರ್ಮಾನ ಮಾಡುವಾಗ ನಮ್ಮನ್ನು ಹೊರಗಿಡುತ್ತಾರೆ ಎಂದವರು ಹೇಳಿದರು.

You may have missed