ವಿವಿಧ ಕ್ಷೇತ್ರಗಳ ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಿದರು.
ವಿವಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ಮಂದಿ ಸಾಧಕರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪಡೆದ ಗಣ್ಯರು:

  • ನ್ಯಾಯಾಂಗ ಕ್ಷೇತ್ರ – ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ,

  • ಧಾರ್ಮಿಕ ಕ್ಷೇತ್ರ- ಮಹಾದೇವಮ್ಮ,

  • ಶಿಕ್ಷಣ ಕ್ಷೇತ್ರ- ರಾಮಣ್ಣ ಮಹಾದೇವ ಗಸಿ,

  • ಸಮಾಜ ಸೇವೆ ಕ್ಷೇತ್ರ- ಜಿ.ಓ.ಮಹಾಂತಪ್ಪ,

  • ಸಾಮಾಜಿಕ ಸಂಘಟನೆ- ಸೋಮಣ್ಣ,

  • ವೈದ್ಯಕೀಯ ಕ್ಷೇತ್ರ- ಶಾರದ ಪ್ರಭು ಹುಲಿ ನಾಯಕ,

  • ಸಾಹಿತ್ಯ ಕ್ಷೇತ್ರ-ಸುಕನ್ಯಾ ಮಾರುತಿ

  • ರಂಗಭೂಮಿ – ಸುಜಾತಮ್ಮ

ಸಮಾರಂಭದಲ್ಲಿ ರಾಜನಹಳ್ಳಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು..

You may have missed