ಪ್ರಜಾಪ್ರಭುತ್ವ ದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ: ದಿನೇಶ್ ಗುಂಡೂರಾವ್

ಮಂಗಳೂರು: ಪ್ರಜಾಪ್ರಭುತ್ವ ದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ಸಹಭಾಗಿತ್ವದಲ್ಲಿ ಆರಂಭಿಸಲಾಗಿರುವ ಮಾಧ್ಯಮ ಆರೋಗ್ಯ ಚಿಕಿತ್ಸಾ ಕೇಂದ್ರದಲ್ಲಿ 50ನೇ ಉಚಿತ ವೈದ್ಯಕಿಯ ತಪಾಸಣಾ ಶಿಬಿರ ಆರೋಗ್ಯ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಗಳು ಭಯ ಮುಕ್ತ ವಾಗಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಈ ರೀತಿಯ ವಾತವರಣ ನಿರ್ಮಿಸಲು ಸಹಕಾರ ಅಗತ್ಯ. ಹೆಚ್ಚು ತ್ತಿರುವ ಸಾಮಾಜಿಕ ಜಾಲತಾಣಗಳ ನಡುವೆ ಪತ್ರಿಕೆ ಗಳು ಜನರಿಗೆ ನೈಜ ಸುದ್ದಿ ಗಳನ್ನು ನೀಡುವಲ್ಲಿ ಇಂದಿಗೂ ವಿಶ್ವಾಸವನ್ನು ಉಳಿಸಿ ಕೊಂಡಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಮಾಧ್ಯಮ ಅಕಾಡೆಮಿಯ ಮಾಜಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ, ರಾಜ್ಯ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಕಾರ್ಯಕ್ರಮ ಸಂಯೋಜಕ ಭಾಸ್ಕರ ರೈ ಕಟ್ಟಾ, ಹಿರಿಯ ಪತ್ರಕರ್ತ ರಾದ ಮನೋಹರ ಪ್ರಸಾದ್, ಆನಂದ ಶೆಟ್ಟಿ, ಅನ್ನು ಮಂಗಳೂರು ಪದಾಧಿಕಾರಿಗಳಾದ ಹಿಲರಿ ಕ್ರಾಸ್ತಾ, ಆರಿಫ್ ಪಡುಬಿದ್ರಿ,ವಿಲ್ಫ್ರೆಡ್ ಡಿ ಸೋಜಾ, ರಾಜೇಶ್ ದಡ್ಡಂಗಡಿ, ಅಶೋಕ್ ಶೆಟ್ಟಿ, ರಾಜೇಶ್ ಶೆಟ್ಟಿ, ಸಂದೇಶ್ ಜಾರ, ಚೇತನ್, ಮೊದಲಾದವರು ಉಪಸ್ಥಿತರಿದ್ದರು.