ಪಕ್ಷಾಂತರ ಪರ್ವ: ‘ಕೈ’ ಹಿಡಿದ ಗೌರಿಶಂಕರ್, ಮಂಜುನಾಥ್

congress flag.1

ಬೆಂಗಳೂರು: ಜೆಡಿಎಸ್ ಮುಖಂಡರು, ಮಾಜಿ ಶಾಸಕರಾದ ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್, ಬೆಂಗಳೂರು ದಾಸರಹಳ್ಳಿಯ ಆರ್ ಮಂಜುನಾಥ್ ಅವರು ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ತಮ್ಮ ಬೆಂಬಲಿಗ ನಾಯಕರು, ಬೆಂಬಲಿಗರ ಜತೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ಈ ಪ್ರಮುಖರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೆಪಿಸಿಸಿ ಉಪಾಧ್ಯಕ್ಷ ಬಿ ಎಲ್ ಶಂಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಶಾಸಕರಾದ ನರೇಂದ್ರಸ್ವಾಮಿ, ಡಾ. ರಂಗನಾಥ, ನೆಲಮಂಗಲ ಶ್ರೀನಿವಾಸಯ್ಯ, ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಕೆ ಗೋವಿಂದರಾಜು, ನಸೀರ್ ಅಹಮದ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

You may have missed