ಒಡಿಶಾದಲ್ಲಿ ಭೀಕರ ಅಪಘಾತ: ಟ್ರಕ್ ಪಲ್ಟಿ, ಆರು ಕಾರ್ಮಿಕರ ದುರ್ಮರಣ

Accident-road closed

ಮಲ್ಕನಗಿರಿ: ಒಡಿಶಾದ ಮಲ್ಕನಗಿರಿ ಜಿಲ್ಲೆಯಲ್ಲಿ 13 ಮಂದಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಸಿಮೆಂಟ್ ತುಂಬಿದ ಟ್ರಕ್ ಘಾಟ್ ರಸ್ತೆಯಲ್ಲಿ ಪಲ್ಟಿಯಾಗಿ ಆರು ಕಾರ್ಮಿಕರು ಸಾವನ್ನಪ್ಪಿ ದ್ದಾರೆ. ಭೀಕರ ಅಪಘಾತದಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಸ್ವಾಭಿಮಾನ್ ಅಂಚಲಾದ ಜೋಡಂಬಾ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಮಲ್ಕಾನ್‌ಗಿರಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿತೇಶ್ ವಾಧ್ವಾನಿ ತಿಳಿಸಿದ್ದಾರೆ.

ಸಿಮೆಂಟ್ ಮತ್ತು ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿ ಹಂತಲಗೂಡ ಎಂಬಲ್ಲಿ ಅಪಘಾತಕ್ಕೀಡಾಗಿದ್ದು, ಹಲವು ಕಾರ್ಮಿಕರನ್ನು ಸಿಮೆಂಟ್ ಚೀಲಗಳ ಅಡಿಯಲ್ಲಿ ಸಿಲುಕಿದ್ದರು. ಈ ಕಾರ್ಮಿಕರನ್ನು ಹೊರತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಶತಪ್ರಯತ್ನ ಮಾಡಿದ್ದಾರೆ.

ಐವರು ಕಾರ್ಮಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಮೃತ ಕಾರ್ಮಿಕರ ಕುಟುಂಬಕ್ಕೆ ರೂ.3 ಲಕ್ಷ ಪರಿಹಾರವನ್ನು ಘೋಷಿಸಿದದ್ದಾರೆ.

You may have missed