ಬಿಜೆಪಿಯ ಗೆಲುವು ‘ಮ್ಯಾಚ್ ಫಿಕ್ಸಿಂಗ್’ ಗಿಂತಲೂ ಗಂಭೀರ, ಅದು ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದ ಸಿದ್ದರಾಮಯ್ಯ

0
Siddaramaiah 1

ಬೆಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ರಾಹುಲ್ ಹೇಳಿಕೆಗೆ ಬಿಜೆಪಿ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಮ್ಯಾಚ್ ಫಿಕ್ಸಿಂಗ್ ಹೇಳಿಕೆ ಮೂಲಕ ಕಾಂಗ್ರೆಸ್ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನವೇ ಸೋಲೊಪ್ಪಿಕೊಂಡಿದೆ ಎಂದು ಟೀಕಿಸಿದೆ.

ಈ ನಡುವೆ ರಾಹುಲ್ ಗಾಂಧಿ ಹೇಳಿಕೆಯನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿಯು ಚುನಾವಣೆಗಳಲ್ಲಿ ಸ್ಪರ್ಧಿಸದೇ, ಏಜನ್ಸಿಗಳನ್ನು ದುರುಪಯೋಗಪಡಿಸಿಕೊಂಡು ಪ್ರಾಬಲ್ಯ ಮೆರೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮ ‘X’ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿ ಕೇವಲ ಸ್ಪರ್ಧಿಸುತ್ತಿಲ್ಲ, ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿದೆ, ಏಜೆನ್ಸಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಮತ್ತು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲು ನಿಯಮಗಳನ್ನು ಬಗ್ಗಿಸುತ್ತಿದೆ ಎಂದು ದೂರಿದ್ದಾರೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದನ್ನು ‘ಮ್ಯಾಚ್ ಫಿಕ್ಸಿಂಗ್’ ಎಂದಷ್ಟೇ ಹೇಳಿದ್ದಾರೆ. ವಾಸ್ತವವಾಗಿ ಅದು ಪ್ರಜಾಪ್ರಭುತ್ವದ ಕೊಲೆ ಎಂದು ಸಿದ್ದರಾಮಯ್ಯ ವ್ಯಾಖ್ಯಾನಿಸಿದ್ದಾರೆ.

Leave a Reply

Your email address will not be published. Required fields are marked *

You may have missed