ಕಳಸಾ ಬಂಡೂರಿ ; ನ.9 ರಂದು ರೈತರ ಆತ್ಮಸ್ಥೈರ್ಯ ಸಮಾವೇಶ

0
kona reddy

ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 100 ದಿನ ಪೂರೈಸಿದೆ. ಆದರೂ ಕೇಂದ್ರ ಸರ್ಕಾರ ಮತ್ತು ಸಂಸದರು ಪ್ರಧಾನಿ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿಲ್ಲ ಎಂದು ಜೆಡಿಎಸ್ ಶಾಸಕ ಹೆಚ್.ಕೋನ ರೆಡ್ಡಿ ಕಿಡಿಕಾರಿದ್ದಾರೆ.

ಈ ಕುರಿತು ಹಾವೇರಿಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿಗಾಗಿ ಅವಳಿ ಜಿಲ್ಲೆಗಳ ರೈತರು ಕಳೆದ ಮೂರು ತಿಂಗಳಿನಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ ಇದುವರೆಗೂ ಸಂಸದರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಮುಂದಿನ ದಿನಗಳಲ್ಲಿ ಜನರಿಗೆ ಕುಡಿಯುವ ನೀರು ಕೊಡಿಸುವಲ್ಲಿ ವಿಫಲವಾದರೆ ಜನರು ಇವರಿಗೆ ನೀರು ಕುಡಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಸಂಸದರು ಗೋವಾಕ್ಕೆ ಅನ್ಯಾಯ ಮಾಡಿ ಇಲ್ಲಿನ ಜನರಿಗೆ ನೀರು ಕೊಡಿಸಿ ಎಂದು ಕೇಳುತ್ತಿಲ್ಲ. ನಮ್ಮ ಪಾಲಿನ ನೀರನ್ನು ನಮಗೆ ನ್ಯಾಯಯುವಾಗಿ ಕೊಡಿಸಬೇಕು ಎಂದ ಅವರು, ಇದು ಪ್ರಧಾನಿ ಮಧ್ಯಸ್ಥಿಕೆಯಿಂದ ಮಾತ್ರ ಸಾಧ್ಯ ಎಂದರು.

ನವೆಂಬರ್ 9 ರಂದು ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಆಗಮಿಸಲಿದ್ದು, ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಡ ರೈತ ಕುಟುಂಬಗಳಿಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದರು.

Leave a Reply

Your email address will not be published. Required fields are marked *

You may have missed