ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ, ಉಳಿದಕಡೆ ಏನು ಕಥೆ? ಬಿಜೆಪಿ ಪ್ರಶ್ನೆ

0
bjp- congress Flag

ಬೆಂಗಳೂರು: ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣದಲ್ಲಿ ಸಿಎಂ ಪುತ್ರ ಯತೀಂದ್ರ ಅವರ ಕೈವಾಡವಿರುವ ಬಗ್ಗೆ ಪ್ರತಿಪಕ್ಷ ಬಿಜೆಪಿ ಸಂಶಯ ವ್ಯಕ್ತಪಡಿಸಿದೆ.

ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ ಇರುವಾಗ ಉಳಿದಕಡೆ ಏನು ಕಥೆ ಎಂದು ಬಿಜೆಪಿ ಪ್ರಶ್ನಿಸಿದೆ.

ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ ಸಿದ್ದರಾಮಯ್ಯರ ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಛೇರಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಕಿರುಕುಳದ ಹಿಂದೆ ವರ್ಗಾವಣೆ ಕಿಂಗ್ ಪಿನ್ ವರುಣಾ ಉಸ್ತುವಾರಿ ಯತೀಂದ್ರ ಸಿದ್ದರಾಮಯ್ಯನವರ ಕೈವಾಡ ಶಂಕೆ ಮೂಡುತ್ತಿದೆ ಎಂದು ಬರೆದುಕೊಂಡಿದೆ. ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ ಇರುವಾಗ ಉಳಿದಕಡೆ ಏನು ಕಥೆ? ಎಂದು ಪ್ರಶ್ನಿಸಿರುವ ವೈಖರಿ ಕೂಡಾ ಗಮನಸೆಳೆದಿದೆ.

Leave a Reply

Your email address will not be published. Required fields are marked *

You may have missed