ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್; 10 ಕಡೆ ದಾಳಿ

0
lokayukththa - Karnataka lokayokt

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಮಂಗಳವಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಮಂಡ್ಯ, ಬೀದರ್, ಮೈಸೂರು, ಧಾರವಾಡ, ಹಾವೇರಿ, ಬೆಂಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ 10 ಸ್ಥಳಗಳಲ್ಲಿ ಅಧಿಕಾರಿ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿವೆ.

  • ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಂ. ಗಿರೀಶ್ (ಮಂಡ್ಯ)
  • ಮುಖ್ಯ ಲೆಕ್ಕಾಧಿಕಾರಿ (ಪಟ್ಟಣ ಯೋಜನೆ) ಸಿ. ಪುಟ್ಟಸ್ವಾಮಿ (ಮಂಡ್ಯ)
  • ಮುಖ್ಯ ಎಂಜಿನಿಯರ್ (ಮೇಲ್ ಕೃಷ್ಣ ಯೋಜನೆ) ಪ್ರೇಮ್ ಸಿಂಗ್ (ಬೀದರ್)
  • ಕಂದಾಯ ನಿರೀಕ್ಷಕ ಸಿ. ರಾಮಸ್ವಾಮಿ (ಹೂಟಗಳ್ಳಿ ಪುರಸಭೆ, ಮೈಸೂರು)
  • ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸುಭಾಷ್ ಚಂದ್ರ (ಧಾರವಾಡ)
  • ಹಿರಿಯ ಪಶುವೈದ್ಯಕೀಯ ಪರೀಕ್ಷಕ ಹುಯಿಲ್ಗೋಳ್ ಸತೀಶ್
  • ಯೋಜನ ನಿರ್ದೇಶಕರ ಕಚೇರಿ, ಹಾವೇರಿ ಶೇಕಪ್ಪ
  • ಆರ್‌ಟಿಒ ಕಚೇರಿ ಅಧೀಕ್ಷಕ ಪಿ. ಕುಮಾರಸ್ವಾಮಿ (ಇಲೆಕ್ಟ್ರಾನಿಕ್ಸ್ ಸಿಟಿ, ಬೆಂಗಳೂರು)
  • ಸಿಮ್ಸ್ ವೈದ್ಯಕೀಯ ಕಾಲೇಜು, ಶಿವಮೊಗ್ಗ ಸಿಎನ್ ಲಕ್ಷ್ಮಿಪತಿ

ಈ 10 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಸಂಬಂಧಿಕರ ಆಸ್ತಿಗಳಲ್ಲೂ ಶೋಧಿಸಲಾಗಿದೆ ಎಂದು ತಿಳಿದುಬಂದಿದೆ.

ನವೆಂಬರ್ 7 ರಂದು ಲೋಕಾಯುಕ್ತ ಬೆಂಗಳೂರು ನಗರದಲ್ಲಿ ಆರು ಆರ್‌ಟಿಒ ಕಚೇರಿಗಳ ಮೇಲೆ ದಾಳಿ ನಡೆಸಿ ಭಾರೀ ಅಕ್ರಮ ಬಲೆಗೆಳೆದಿತ್ತು. ಯಶವಂತಪುರ, ರಾಜಾಜಿನಗರ, ಜಯನಗರ, ಯಲಹಂಕ, ಕಸ್ತೂರಿನಗರ ಮತ್ತು ಕೆ.ಆರ್.ಪುರಂ ಕಚೇರಿಗಳಲ್ಲಿ ನಡೆದ ದಾಳಿಯಲ್ಲಿ ಲಂಚ ವಹಿವಾಟಿನ ಸಾಕ್ಷಿ ಪತ್ತೆಯಾಗಿ ಹೆಚ್ಚಿನ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಇದೇ ರೀತಿ, ಅಕ್ಟೋಬರ್ 14, 2025 ರಂದು 12 ಅಧಿಕಾರಿಗಳ ವಿರುದ್ಧ ನಡೆದ ದಾಳಿಯಲ್ಲಿ 381.08 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾದಗಿತ್ತು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಇದೀಗ ಮಂಗಳವಾರ ಮತ್ತೆ 10 ಕಡೆ ನಡೆದಿದೆ.

Leave a Reply

Your email address will not be published. Required fields are marked *

You may have missed