ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

0
Mys-JSS-111-Jayatyotsava

ಮೈಸೂರು: ನಗರದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಕಿರಿಯ ಪೀಠಾಧಿಪತಿ ಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿಗಳ 23ನೇ ಚಾತುರ್ಮಾಸ್ಯ ವೈಭವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.

ಕಾರ್ಯಕ್ರಮದ ಅಂಗವಾಗಿ ಶ್ರೀಗಳು ಗೋಪೂಜೆ ನೆರವೇರಿಸಿದರು. ಬಳಿಕ ಕಡಪ ಆಶ್ರಮದ ಭಜನಾ ತಂಡದಿಂದ ಭಜನಾ ಸೇವೆ ನಡೆಯಿತು. ಇದೇ ವೇಳೆ ಶ್ರೀಚಕ್ರ ಪೂಜೆಯನ್ನು ಶ್ರೀಗಳು ನೆರವೇರಿಸಿದರು.

ನಂತರ ಮೈಸೂರಿನ ಸುತ್ತೂರು ಮಠದಲ್ಲಿ ನಡೆದ ಡಾ. ಶ್ರೀ ಶಿವರಾಜೇಂದ್ರ ಮಹಾಸ್ವಾಮೀಜಿಯವರ 111ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ, ಮಾಜಿ ಮುಖ್ಯಮಂತ್ರಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಸಂಜೆ ಪೌಂಡರೀಕಾ ಮಂಟಪದಲ್ಲಿ ನಡೆದ ಧರ್ಮಸಭೆಯಲ್ಲಿ ಶ್ರೀಗಳು ವಿಷ್ಣುಪುರಾಣ ಕಥಾ ಮಾಲಿಕೆ ಕುರಿತು ಪ್ರವಚನ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪ್ರವಚನ ಆಲಿಸಿ ಭಕ್ತಿ ಪರವಶರಾದರು.

Leave a Reply

Your email address will not be published. Required fields are marked *