ವಿಧಾನಸಭೆಯಲ್ಲಿ ಲೋಕಾಯುಕ್ತ ಪದಚ್ಯುತಿಗೆ ಪ್ರಸ್ತಾವನೆ

0
vidhanasoudha-vs

ಭ್ರಷ್ಟಾಚಾರ ಆರೋಪದ ಸುಳಿಗೆ ಸಿಲುಕಿರುವ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರರಾವ್ ಅವರನ್ನು ಪದಚ್ಯುತಿಗೊಳಿಸುವ ಪ್ರಕ್ರಿಯೆ ಮತ್ತಷ್ಟು ಬಿರುಸುಗೊಂಡಿದೆ. ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಕಲಾಪ ಮುಗಿದ ನಂತರ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ನ ವೈ.ಎಸ್.ವಿ. ದತ್ತಾ, ಲೋಕಾಯುಕ್ತರ ಪದಚ್ಯುತಿಗೆ ಪ್ರಸ್ತಾವನೆ ಮಂಡಿಸಿದರು. ಲೋಕಾಯುಕ್ತರ ಪದಚ್ಯುತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಟಿ.ಬಿ. ಜಯಚಂದ್ರ, ಬೆಂಬಲ ಸೂಚಿಸಿದರು.
ಸ್ಪೀಕರ್ ಕಾಗೋಡು ತಿಮ್ಮಪ್ಪ ಈ ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ ಎಂದು ಪ್ರಕಟಿಸಿದರು.
ಇದೇ ವೇಳೆ, ವಿಧಾನಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ, ವಿಧಾನಸಭೆಯ ಅಧಿಕಾರಿಗಳು ಆಸೀನರಾಗಿರುವ ಸ್ಥಳದಲ್ಲಿ ಕುಳಿತಿದ್ದು, ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಯಿತು. ಕೂಡಲೇ ಅವರನ್ನು ಸದನದಿಂದ ಹೊರಗೆ ಕಳುಹಿಸಿ ಎಂದು ಬಿಜೆಪಿ, ಜೆಡಿಎಸ್ ನಾಯಕರು ಪಟ್ಟು ಹಿಡಿದರು. ಈ ವೇಳೆ, ಕೆಲ ಕಾಲ ಗದ್ದಲ-ಕೋಲಾಹಲ ಉಂಟಾಯಿತು. ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಗದ್ದಲ ಉಂಟಾಯಿತು. ಹೀಗಾಗಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಕಲಾಪವನ್ನು 10 ನಿಮಿಷಗಳವರೆಗೆ ಕಲಾಪ ಮುಂದೂಡಿದರು..

Leave a Reply

Your email address will not be published. Required fields are marked *

You may have missed