ಅಡ್ವೋಕೇಟ್ ಜನರಲ್ ಪ್ರೋ. ರವಿವರ್ಮಕುಮಾರ್ ರಾಜೀನಾಮೆ

0
ravi-varma-kumar

ರಾಜ್ಯದ ಅಡ್ವೋಕೇಟ್ ಜನರಲ್ ಪ್ರೋ. ರವಿವರ್ಮಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸರ್ಕಾರಿ ವಕೀಲರ ನೇಮಕಾತಿ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಅಡ್ವೋಕೇಟ್ ಜನರಲ್ ಪ್ರೋ. ರವಿವರ್ಮಕುಮಾರ್ ಅವರು ಸೋಮವಾರ ತಮ್ಮ ರಾಜೀನಾಮೆ ನೀಡಿದ್ದಾರೆ.ರಾಜ್ಯ ಸರ್ಕಾರ ಮೂರು ತಿಂಗಳ ಹಿಂದೆ ಕಲಬುರಗಿ ಎಎಜಿಯಾಗಿ ರಾಘವೇಂದ್ರ ನಾಡಗೌಡ ಹಾಗೂ ದೆಹಲಿ ಎಎಜಿಯಾಗಿ ದೇವದತ್ ಕಾಮತ್ ಅವರನ್ನು ನೇಮಕ ಮಾಡಿತ್ತು. ಇತ್ತೀಚೆಗಷ್ಟೆ ಈ ಇಬ್ಬರು ಅಧಿಕಾರ ವಹಿಸಿಕೊಂಡಿದ್ದು ಈ ನೇಮಕಾತಿ ವಿಚಾರದಲ್ಲಿ ಉಂಟಾದ ವಿವಾದದಿಂದ ಬೇಸತ್ತು ರವಿವರ್ಮಕುಮಾರ್ ಪದವಿಯಿಂದ ನಿರ್ಗಮಿಸಿದ್ದಾರೆ.

ಅವರು, ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಅವರ ಕಚೇರಿಗೆ ತಲುಪಿಸಿದ್ದಾರೆ. ಆದರೆ, ರಾಜೀನಾಮೆ ಅಂಗೀಕಾರ ಕುರಿತಂತೆ ಯಾವುದೇ  ಮಾಹಿತಿಯನ್ನು ಸಿಎಂ ಕಚೇರಿ ಬಹಿರಂಗಪಡಿಸಿಲ್ಲ. ರಾಜ್ಯ ಸರ್ಕಾರದ ಹಲವು ವಿಚಾರಗಳಲ್ಲಿ ಅಸಮಾಧಾನಗೊಂಡಿರುವ ರವಿವರ್ಮಕುಮಾರ್, ಮೂರು ತಿಂಗಳ ಹಿಂದೊಮ್ಮೆ ಅಡ್ವೊಕೇಟ್ ಜನರಲ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಪ್ರಮುಖರ ಮನವೊಲಿಕೆಯ ಹಿನ್ನೆಲೆಯಲ್ಲಿ ಅವರು ತಮ್ಮ ನಿರ್ಧಾರವನ್ನು ಬದಲಿಸಿದ್ದರು. ಆದರೆ ಇದೀಗ ಮತ್ತೊಮ್ಮೆ ಸರ್ಕಾರದ ನಿರ್ಧಾರದ ಬಗ್ಗೆ ಮುನಿಸಿಕೊಂಡ ಅವರು, ತಮ್ಮ ಪದವಿಯಿಂದಲೇ ನಿರ್ಗಮಿಸಿದ್ದಾರೆ

Leave a Reply

Your email address will not be published. Required fields are marked *

You may have missed