ಅಡಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಆರೋಗ್ಯವರ್ಧಕವೆಂದು ಸಾಬೀತು: ಗೃಹ ಸಚಿವ ಆರಗ ಜ್ಞಾನೇಂದ್ರ

0
araga-jnanendr-300x217

ಬೆಂಗಳೂರು: ಅಡಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಆರೋಗ್ಯವರ್ಧಕವೆಂದು ಸಾಬೀತಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅಡಕೆ ಸೇವನೆಯಿಂದ ಹತ್ತು ಹಲವು ಆರೋಗ್ಯ ಲಾಭಗಳಿವೆ ಎಂದು ತಜ್ಞರ ಸಂಶೋಧನಾ ವರದಿಯಿಂದ ವೇದ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಗಮನ ಸೆಳೆವ ಸೂಚನೆಗೆ ಉತ್ತರವಾಗಿ ಮಾತನಾಡುತ್ತ ಈ ವಿಷಯ ತಿಳಿಸಿದ ಸಚಿವ ಅರಗ ಜ್ಞಾನೇಂದ್ರ ಅವರು, ಪ್ರತಿಷ್ಠಿತ ಎಂ.ಎಸ್ ರಾಮಯ್ಯ ವಿಶ್ವವಿದ್ಯಾಲಯದ ಸಂಸ್ಥೆ ಈ ಕುರಿತು ಸಂಶೋಧನೆ ನಡೆಸಿದ್ದು ಸದ್ಯದಲ್ಲಿಯೇ ಅಂತರಾಷ್ಟ್ರೀಯ ಮಾನ್ಯತೆ ಪಡೆದ ನಿಯತ ಕಾಲಿಕಾದಲ್ಲಿ ಪ್ರಕಟಣೆ ಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ವಿಶ್ವವಿದ್ಯಾಲಯದ ಸಂಸ್ಥೆ ನಡೆಸಿದ ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಅಡಿಕೆ ತೀವ್ರತರದ ಗಾಯವನ್ನು ಗುಣಪಡಿಸುವ ಮಧುಮೇಹ ಸಮಸ್ಯೆಯ ನಿಯಂತ್ರಣ, ಹೃದಯ ಸಂಬಂಧಿತ ಕಾಯಿಲೆಗಳು, ಉದರದ ಅಲ್ಸರ್ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಶಾದಾಯಿಕ ಫಲಿತಾಂಶಗಳು ಬಂದಿವೆ ಎಂದು ಸಚಿವ ಅರಗ ಜ್ಞಾನೇಂದ್ರ ಅವರು ಮಾಹಿತಿ ಹಂಚಿಕೊಂಡರು.

ಸುಪ್ರೀಂಕೋರ್ಟಿನಲ್ಲಿ ಅಡಕೆ ಸೇವನೆಯಿಂದ ಆಗುವ ಆರೋಗ್ಯ ಲಾಭಗಳ ಕುರಿತು ಕಂಡು ಬಂದಿರುವ ಸಂಶೋಧನಾ ಫಲಿತಾಂಶ ವರದಿಗಳನ್ನು ಸಲ್ಲಿಸಲಾಗುವುದು ಎಂದೂ ಅವರು ಸದನಕ್ಕೆ ತಿಳಿಸಿದರು.

Leave a Reply

Your email address will not be published. Required fields are marked *

You may have missed