ಬಿಟ್ಕಾಯಿನ್ ಹಗರಣ: ಅಂತಾರಾಷ್ಟ್ರೀಯ ಹ್ಯಾಕರ್ ರಾಜೇಂದ್ರಸಿಂಗ್ ಬಗ್ಗೆ ಕುತೂಹಲ

ಬೆಂಗಳೂರು: ಬಿಟ್ಕಾಯಿನ್ ಹಗರಣ ಸಂಬಂಧ ತನಿಖೆ ಕೈಗೊಂಡಿರುವ ಎಸ್ಐಟಿ ಪೊಲೀಸರು ಅಂತಾರಾಷ್ಟ್ರೀಯ ಹ್ಯಾಕರ್ ರಾಜೇಂದ್ರಸಿಂಗ್ ನನ್ನುಬಂಧಿಸಿದ್ದಾರೆ.
ಸುಮಾರು ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ಹ್ಯಾಕರ್ ರಾಜೇಂದ್ರಸಿಂಗ್ ನನ್ನು ಬಂಧಿಸಿದ್ದು ಈತ ಶ್ರೀಕಿಗೂ ಮುನ್ನವೇ ಹ್ಯಾಕಿಂಗ್ ನಲ್ಲಿ ಹಲವಾರು ಕೃತ್ಯಗಳನ್ನು ನಡೆಸಿದ್ದಾನೆ ಎನ್ನಲಾಗಿದೆ. ಸರ್ಕಾರಿ ಹಾಗೂ ಖಾಸಗಿ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡುತ್ತಿದ್ದಈತನಿಗಾಗಿ ಕೇಂದ್ರ ತನಿಖಾ ಸಂಸ್ಥೆಗಳು ಸುದೀರ್ಘ ಕಾಲದಿಂದ ಹುಡುಕಾಟ ನಡೆಸುತ್ತಿದ್ದವು. ಇದೀಗ ಈತ ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದ ತಂಡದ ಬಲೆಗೆ ಬಿದ್ದಿದ್ದಾನೆ.
ಪಂಜಾಬ್ ಮೂಲದ ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ಈ ಪ್ರಕರಣದಲ್ಲಿ ಮತ್ತಷ್ಟು ಸತ್ಯ ಹೊರತರುವ ಪ್ರಯತ್ನದಲ್ಲಿದ್ದಾರೆ.