ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಅಶೋಕ್‌ಗೆ ವಿಜಯೇಂದ್ರ ಅಭಿನಂದನೆ

Vijayendra congratulates R Ashok

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಮೂಲಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಹೊರ ಹೊಮ್ಮಿರುವ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಆರ್.ಅಶೋಕ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂದಿಸಿಸ್ದಾರೆ.

ತಮ್ಮ ಹಿರಿತನ, ಸುದೀರ್ಘ ಅನುಭವ ಹಾಗೂ ಹೋರಾಟದ ಹಿನ್ನಲೆಯಲ್ಲಿ ಜನರ ದನಿಯಾಗಿ ಸರ್ಕಾರದ ಜನ ವಿರೋಧಿ ನಿಲುವುಗಳ ವಿರುದ್ಧ ಸದನದ ಒಳಗೆ, ಹಾಗೂ ಹೊರಗೆ ಸಮರ್ಥವಾಗಿ ಹೋರಾಡುವ ಶಕ್ತಿ ನಿಮಗೆ ಲಭಿಸಲೆಂದು ಹೃದಯ ತುಂಬಿ ಹಾರೈಸುತ್ತೇನೆ. ರಾಜ್ಯ ಬಿಜೆಪಿ ಸದಾ ನಿಮ್ಮೊಂದಿಗಿರಲಿದೆ ಎಙದವರು ಹೇಳಿದ್ದಾರೆ.

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಸುಸೂತ್ರವಾಗಿ ನಡೆಯಲು ವೀಕ್ಷಕರಾಗಿ ಆಗಮಿಸಿ ಮಾರ್ಗದರ್ಶನ ನೀಡಿದ ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮ್, ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ‌ಸದಸ್ಯ ಯಡಿಯೂರಪ್ಪ,, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹಿತ ಬಿಜೆಪಿ ನಾಯಕರಿಗೆ ವಿಜಯೇಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ.

You may have missed