ಪ್ರಾಸಿಕ್ಯೂಷನ್ ಅನುಮತಿ ರದ್ದು ಬಿಎಸ್ ವೈಗೆ ರಿಲೀಫ್-

0
bsy yadiyurappa

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಹಲವು ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಮಂಗಳವಾರ ರದ್ದು ಮಾಡಿದೆ. ಹೈಕೋರ್ಟ್ ಪೀಠದ ಹಂಗಾಮಿ ಸಿಜೆ ಎಸ್ ಕೆ ಮುಖರ್ಜಿ, ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿಯನ್ನು ರದ್ದು ಪಡಿಸಿ ಆದೇಶ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣದ ಸಂಬಂಧ ವಿಚಾರಣೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡಬೇಕೆಂದು ಸಿರಾಜಿನ್ ಭಾಷಾ ಅವರು ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಗೆ ದೂರು ನೀಡಿದ್ದರು. ಅದರಂತೆ ಭಾರದ್ವಾಜ್ ಬಿಎಸ್ ವೈ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು.
ಭೂ ಹಗರಣ ಪ್ರಕರಣದಲ್ಲಿ ಶಾಮೀಲಾಗಿರುವ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ಕೋರಿ ಜಸ್ಟೀಸ್ ಲಾಯರ್ ಫೋರಂನ ವಕೀಲರಾದ ಸಿರಾಜಿನ್ ಬಾಷಾ ಹಾಗೂ ಬಾಲರಾಜ್ ಅವರು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ 2010 ಡಿಸೆಂಬರ್ 28ರಂದು ಮನವಿ ಸಲ್ಲಿಸಿದ್ದರು.
ನಂತರ ಭ್ರಷ್ಟಾಚಾರದ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯಪಾಲ ಹಂಸರಾಜ್ ಅವರು ಜನವರಿ 21ರಂದು ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಭೂ ಹಗರಣ ಮತ್ತು ಭ್ರಷ್ಟಾಚಾರ ಆರೋಪದಡಿ ಮುಖ್ಯಮಂತ್ರಿಯೊಬ್ಬರ ವಿರುದ್ಧ ರಾಜ್ಯಪಾಲರು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅನುಮತಿ ನೀಡಿರುವ ಮೊದಲ ಪ್ರಕರಣ ಇದಾಗಿತ್ತು. ಇದರಿಂದಾಗಿ ಆಡಳಿತಾರೂಢ ಬಿಜೆಪಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು. ಈ ಪ್ರಾಸಿಕ್ಯೂಷನ್ ಅನುಮತಿಯನ್ನು ರದ್ದುಪಡಿಸಬೇಕೆಂದು ಕೋರಿ ಬಿಎಸ್ ವೈ ಹೈಕೋರ್ಟ್ ಮೆಟ್ಟಿಲೇರಿದ್ದರು.

Leave a Reply

Your email address will not be published. Required fields are marked *

You may have missed