ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ! ಅಶೋಕ್ ಭವಿಷ್ಯ

0
R Ashok

ಮೈಸೂರು: ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರದೇಶ ಕಾಂಗ್ರೆಸ್ ನಾಯಕರ ಮುಸುಕಿನ ಗುದ್ದಾಟ ಬಗ್ಗೆ ಅಶೋಕ್ ತಮ್ಮದೇ ದಾಟಿಯಲ್ಲಿ ವಿಶ್ಲೇಷಿಸಿದರು. ಜೆಡಿಎಸ್‌ನಿಂದ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಆದರೆ ಕಾಂಗ್ರೆಸ್‌ನಲ್ಲೇ ಇದ್ದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಲಿಲ್ಲ. ಆದ್ದರಿಂದಲೇ ಖರ್ಗೆ ಸಿಎಂ ಆಗದಿರುವ ಬಗ್ಗೆ ಹೇಳಿದ್ದಾರೆ. ಈಗಲಾದರೂ ನನ್ನನ್ನು ಸಿಎಂ ಮಾಡಿ ಋಣ ತೀರಿಸಿ ಎಂದು ಅವರು ಹೇಳಿದ್ದಾರೆ. ಸಚಿವ ರಾಜಣ್ಣ ಈಗಾಗಲೇ ಕ್ರಾಂತಿಯ ಬಗ್ಗೆ ಹೇಳಿದ್ದಾರೆ. ಖರ್ಗೆಯವರಯು ಸರಿಯಾದ ಸಮಯಕ್ಕೆ ಮಾವಿನ ಹಣ್ಣಿಗೆ ಕಲ್ಲು ಹೊಡೆದಿದ್ದಾರೆ. ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದರು.

ಎಸ್‌.ಎಂ.ಕೃಷ್ಣ ನಿಧನಾನಂತರ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಾಡುತ್ತಿದ್ದಾರೆ. ಎಸ್‌.ಎಂ.ಕೃಷ್ಣ ಐಟಿ ಬಿಟಿಗೆ ನೀಡಿದ ಕೊಡುಗೆಯಿಂದಲೇ ಇಷ್ಟು ಆದಾಯ ರಾಜ್ಯಕ್ಕೆ ಬರುತ್ತಿದೆ. ನಾನು ಜ್ಯೋತಿಷ್ಯ ಹೇಳಲ್ಲ. ಆದರೆ ಖಚಿತವಾಗಿ ಒಪ್ಪಂದ ಆಗಿದೆ ಎಂದು ಶಾಸಕರೇ ಹೇಳಿದ್ದಾರೆ. ಎಲ್ಲ ಜಿಲ್ಲೆಗಳ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್‌ ಅವರಿಗೆ ದೇವರೇ ಗತಿ. ಯಾವ ದೇವರು ವರ ನೀಡುತ್ತಾರೆ ಎಂದು ಅವರು ನೋಡಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲ್ಲ. ಸಿದ್ದರಾಮಯ್ಯ ಮೈಸೂರಿನಲ್ಲಿ ಒಂದೇ ಒಂದು ಕೆರೆ ಕಟ್ಟಿಸಿಲ್ಲ. ಆದರೂ ಅವರನ್ನು ಮಹಾರಾಜರಿಗೆ ಹೋಲಿಕೆ ಮಾಡುತ್ತಾರೆ. ಶಾಸಕರ ಜೊತೆ ಇವರು ಅಭಿವೃದ್ಧಿ ಬಗ್ಗೆ ಚರ್ಚೆಯೇ ಮಾಡಲ್ಲ ಎಂದರು.

Leave a Reply

Your email address will not be published. Required fields are marked *

You may have missed