‘ಪ್ರಿಯಾಂಕಾ ಗಾಂಧಿ ಸಂಸತ್ತಿನಲ್ಲಿ ಶೋಷಿತರ ಧ್ವನಿಯಾಗಲಿದ್ದಾರೆ’; ಮಂಜುನಾಥ್ ಭಂಡಾರಿ

0
Priyanka Gandhi - Manjunath Bhandary- KL Sharma

ವಯನಾಡ್: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಇಡೀ ದೇಶದ ಗಮನಸೆಳೆದಿದೆ. ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು ಅವರನ್ನು ಗೆಲ್ಲಿಸಲು ಪಕ್ಷದ ನಾಯಕರು ಅವಿರತ ಶ್ರಮ ವಹಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಗೆಲ್ಲಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕರೂ ಶ್ರಮವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಕರಾವಳಿಯ ಶಾಸಕ ಮಂಜುನಾಥ್ ಭಂಡಾರಿ ತಮ್ಮ ಕಾರ್ಯಕರ್ತ ಸೈನ್ಯದೊಂದಿಗೆ ವಯನಾಡಿನ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿ ರಾಹುಲ್ ಸಹೋದರಿಯನ್ನು ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕ ಕರಾವಳಿ ಜಿಲ್ಲೆಗಳ ಬಹಳಷ್ಟು ಮಂದಿ ವಯನಾಡಿನಲ್ಲಿದ್ದು ಅವರ ಮತಗಳನ್ನು ಪೇರಿಸಲು ಮಂಜುನಾಥ್ ಭಂಡಾರಿ ಪ್ರಯತ್ನ ನಡೆಸಿದ್ದಾರೆ.


ಇದೇ ವೇಳೆ, ವಯನಾಡ್ ಲೋಕಸಭಾ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಅವರು ಕೋಟತ್ತಾರ ಗ್ರಾಮ ಪಂಚಾಯತ್’ನಲ್ಲಿ ಪ್ರಿಯಾಂಕಾ ಗಾಂಧಿ ಪರ ನಡೆಸಿದ ಪ್ರಚಾರ ಕಾರ್ಯಕ್ರಮದಲ್ಲಿ ಅಮೇಥಿ ಸಂಸದ ಕೆ.ಎಲ್ ಶರ್ಮಾ ಭಾಗವಹಿಸಿ ಗಮನಸೆಳೆದರು.

ಈ ನಡುವೆ, ವಯನಾಡ್ ಅಖಾಡದ ಫಲಿತಾಂಶ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಡಾ.ಮಂಜುನಾಥ್ ಭಂಡಾರಿ, ಇಲ್ಲಿಂದಲೇ ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ ಎಂದು ಆಶಿಸಿದರು. ಪ್ರಿಯಾಂಕಾ ಗಾಂಧಿಯವರು ದೇಶದ ಭವಿಷ್ಯದ ನಾಯಕಿಯಾಗಲಿದ್ದಾರೆ. ಅವರ ಆಯ್ಕೆಯ ಮೂಲಕ, ಶೋಷಿತರ ಬಡವರ ತಳವರ್ಗದ ಜನರ ಪರವಾದ ಪ್ರಬಲವಾದ ಮತ್ತೊಂದು ದನಿ ಸಂಸತ್ತಿನಲ್ಲಿ ಮೊಳಗಲಿದೆ. ಅಂತಹಾ ಅವಕಾಶವನ್ನು ದಕ್ಷಿಣ ಭಾರತದ ಜನತೆ ನೀಡುತ್ತಿದ್ದಾರೆ ಎಂಬುದು ನಮಗೆ ಹೆಮ್ಮೆ ಅನ್ನಿಸುತ್ತಿದೆ ಎಂದು ಮಂಜುನಾಥ್ ಭಂಡಾರಿ ಹೇಳಿದ್ದಾರೆ.

ಕಳೆದ ಹಲವಾರು ವರ್ಷಗಳಲ್ಲಿ ಕರ್ನಾಟಕವಷ್ಟೇ ಅಲ್ಲ, ಜಮ್ಮು ಕಾಶ್ಮೀರ ಸಹಿತ ಹಲವು ರಾಜ್ಯಗಳ ಚುನಾವಣೆಗಳಲ್ಲೂ ಉಸ್ತುವಾರಿ ವಹಿಸಿಕೊಂಡು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿರುವ ಮಂಜುನಾಥ್ ಭಂಡಾರಿ ಅವರು ವಯನಾಡಿನಲ್ಲೂ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ ತುಂಬುತ್ತಿದ್ದಾರೆ ಎಂದು ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿ ಮುಖಂಡರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed