ಮಣ್ಣಿನ ಮಕ್ಕಳ ಮರಣ ಮೃದಂಗ ; ಕಲಬುರಗಿ, ಹಾವೇರಿ, ತುಮಕೂರಿನಲ್ಲಿ ರೈತರ ಆತ್ಮಹತ್ಯೆ

ರಾಜ್ಯದಲ್ಲಿ ಅನ್ನದಾತರ ಆತ್ಮಹತ್ಯೆ ಸರಣಿ ನಿಲ್ಲುತ್ತಿಲ್ಲ. ಸಾಲಬಾಧೆ ತಾಳಲಾರದೇ ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ತಾಲ್ಲೂಕಿನ ಕನಕಾಪುರ ಗ್ರಾಮದಲ್ಲಿ ನಡೆದಿದೆ.
40 ವರ್ಷದ ಪರಸನಗೌಡ ಕರೇಗೌಡ ಆತ್ಮಹತ್ಯೆಗೆ ಶರಣಾದ ರೈತ. ಮೂರು ಎಕರೆ ಜಮೀನು ಹೊಂದಿದ್ದು, ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಆದರೆ, ಅತಿಯಾದ ಮಳೆಯಿಂದಾ ಬೆಳೆ ನಷ್ಟವಾಗಿತ್ತು. ಬಿತ್ತನೆಗಾಗಿ ಸಾಕಷ್ಟು ಸಾಲ ಮಾಡಿದ್ದರು. ಅಲ್ಲದೇ ಬ್ಯಾಂಕ್ ನಲ್ಲೂ ಸಾಲ ಮಾಡಿದ್ದರು. ಹೀಗಾಗಿ ಸಾಲದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಗೋಪಾಲ ಬ್ಯಾಕೋಡ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತ್ತೊಂದೆಡೆ ಕಲ್ಬುರ್ಗಿ ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಳಂದ ತಾಲ್ಲೂಕಿನ ಕನಮಾಸ ಗ್ರಾಮದಲ್ಲಿ ರೈತ ಅಶೋಕ ಸಾಳೆ ಕಬ್ಬು ಬೆಳೆಯಲ್ಲಿ ನಷ್ಟವಾಗಿದ್ದರಿಂದ ಬೇಸತ್ತು, ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತ 4 ಲಕ್ಷ ರೂಪಾಯಿ ಸಾಲ ಮಾಡಿದ್ದ. ಹೀಗಾಗಿ ಸಾಲ ತೀರಿಸದಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಆಳಂದ ತಾಲ್ಲೂಕಿನಲ್ಲಿ ಮತ್ತೊಬ್ಬ ರೈತ ಸಾಲಬಾಧೆ ತಾಳಲಾರದೆ ನಿನ್ನೆ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದ. ಕಲ್ಬುರ್ಗಿಯ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.
ತುಮಕೂರು ಜಿಲ್ಲೆ ಕುಣಿಗಲ್ ನಲ್ಲಿ ಭಾನುವಾರ ರಾತ್ರಿ ಇಬ್ಬರು ರೈತರು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಾವನ್ನಪ್ಪಿದ್ದಾರೆ…