Bngaluru - Rain - 18.05.2025 2

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಭಾನುವಾರ ಮತ್ತು ಸೋಮವಾರ ಸುರಿದ ಭಾರೀ ಮಳೆಗೆ ಹಲವು ಜೀವಗಳು ಬಲಿಯಾಗಿವೆ.

ಸೋಮವಾರ ಬಿಟಿಎಂ ಲೇಔಟ್ ಸಮೀಪದ ಎನ್.ಎಸ್.ಪಾಳ್ಯದಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​’ನಲ್ಲಿ ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು 55 ವರ್ಷದ ಮನೋಹರ ಕಾಮತ್​​ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಎಂದು ಗುರುತಿಸಲಾಗಿದೆ.

ಇದಕ್ಕೂ ಮುನ್ನ ಚನ್ನಸಂದ್ರ ಬಳಿ ಬೃಹತ್ ಕಾಂಪೌಂಡ್​ನ ಗೋಡೆ ಕುಸಿದು ಶಶಿಕಲಾ ಎಂಬವರು ಸಾವಿಗೀಡಾಗಿದ್ದಾರೆ. ಮತ್ತೊಂದೆಡೆ, ಉತ್ತರ ಕನ್ನಡ ಜಿಲ್ಲೆ ಅಂಕೋಲ ಸಮೀಪದ ಉಳವರೆ ಗ್ರಾಮದಲ್ಲಿ ಸಿಡಿಲು ಬಡಿದು 65 ವರ್ಷದ ತಮ್ಮಣ್ಣಿ ಅನಂತಗೌಡ ಎಂಬವರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You may have missed