ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

0
Karnataka-police-hoysala2-750x414-1-300x166-1

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನವನ್ನು ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯವ್ಯಾಪಿ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡುವಂತೆ ಸಿಡಬ್ಲ್ಯುಎಂಎ ನೀಡಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕ ರಾಜ್ಯ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್, ವ್ಯಾಪಾರಿಗಳು, ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರು ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಕುಡಿಯುವ ನೀರು ಹಾಗೂ ನೀರಾವರಿಗೆ ಸಂಕಷ್ಟ ಎದುರಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ರೈತರಿಗೆ ಅನ್ಯಾಯವಾಗಲಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ಸಭೆಯ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕರ್ನಾಟಕಕ್ಕೆ ಬರುವುದನ್ನು ವಿರೋಧಿಸುವುದಿಲ್ಲ. ಆದರೆ ಕಾವೇರಿ ನೀರು ಬಿಡುಗಡೆಗೆ ಬೆಂಬಲ ಸೂಚಿಸಲು ಬಂದರೆ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *