ಜುಲೈ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕ್ಲೈಮಾಕ್ಸ್; 10 ಹೊಸ ಮುಖಗಳಿಗೆ ಮಂತ್ರಿ ಸ್ಥಾನ ಸಾಧ್ಯತೆ

0
Rahul-Gandhi-Hari-Prasad-Siddaramaiah-Dks-300x193-1

ನವದೆಹಲಿ/ಬೆಂಗಳೂರು : ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ರೂಪ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಜುಲೈ 18ರಂದು ನವದೆಹಲಿಗೆ ತೆರಳಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಈ ಸಭೆಯಲ್ಲಿ ಹೊಸ ಸಚಿವರ ಪಟ್ಟಿಗೆ ಅಂತಿಮ ಒಪ್ಪಿಗೆ ದೊರೆಯುವ ನಿರೀಕ್ಷೆಯಿದ್ದು, ಬಳಿಕ ಜುಲೈ 21 ಅಥವಾ 22ರಂದು ಸಚಿವರ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ. ಶುಭ ಮುಹೂರ್ತವನ್ನು ಗಮನದಲ್ಲಿಟ್ಟುಕೊಂಡು ದಿನಾಂಕ ಅಂತಿಮಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಸಚಿವ ಸ್ಥಾನಾಕಾಂಕ್ಷಿ ಶಾಸಕರು ಎಐಸಿಸಿ ನಾಯಕರನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಕೂಡ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಪಕ್ಷದ ಮೂಲಗಳ ಪ್ರಕಾರ, ಈ ಬಾರಿ ಸುಮಾರು 10 ಹೊಸ ಮುಖಗಳಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದ್ದು, ಕೆಲವು ಹಾಲಿ ಸಚಿವರಿಗೂ ಅವಕಾಶ ಮುಂದುವರಿಯಬಹುದು.

2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಬಗ್ಗೆ ಕಾಂಗ್ರೆಸ್ ನಾಯಕತ್ವ ಚಿಂತನೆ ನಡೆಸಿದೆ ಎನ್ನಲಾಗಿದೆ. ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ ಹಾಗೂ ವಿವಿಧ ಬಣಗಳ ಬೇಡಿಕೆಗಳನ್ನು ಪರಿಗಣಿಸಿ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಮುದ್ರೆ ಒತ್ತುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *