ಸರ್ಕಾರದ ವಿರುದ್ದ ಹೋರಾಟ.. ಇದೀಗ ವಕೀಲರ ಸರದಿ..

0
Lawyers-protest-ap-ranganath-300x225

ಬೆಂಗಳೂರು: ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಒತ್ತಾಯಿಸಿ ಹೋರಾಟಕ್ಕಿಳಿಯಲು ವಕೀಲರು ಸಜ್ಜಾಗಿದ್ದಾರೆ. ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಮಳವಳ್ಳಿ ವಕೀಲರ ಸಂಘದಲ್ಲಿ ನಡೆದ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಎ.ಪಿ.ರಂಗನಾಥ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಒತ್ತಾಯ ಮಾಡಿ, ಬೆಂಗಳೂರು ವಕೀಲರ ಸಂಘ ಮತ್ತು ವಕೀಲರ ಪರಿಷತ್ ಈಗಾಗಲೇ ತೀರ್ಮಾನ ಮಾಡಿದೆ. ಅದರಂತೆ ಇನ್ನೆರಡು ದಿನಗಳಲ್ಲಿ ದಿನಾಂಕ ನಿಗದಿ ಮಾಡಿ ಬೆಳಗಾವಿಯ ಸುವರ್ಣ ಸೌಧದ ಮುಂದೆ ಬೆಳಗಾವಿ ಚಲೋ ಹೋರಾಟ ಮಾಡಬೇಕು, ಇಲ್ಲದಿದ್ದಲ್ಲಿ ಸಮಾನ ಮನಸ್ಕ ವಕೀಲರ ನೇತೃತ್ವದಲ್ಲಿ, ವಕೀಲರು ಒಗ್ಗೂಡಿ ಬೆಳಗಾವಿ ಚಲೋಗೆ ದಿನಾಂಕ ನಿಗದಿ ಮಾಡಲಾಗುವುದು ಎಂದರು.  ಈ ಹೋರಾಟಕ್ಕೆ ಎಲ್ಲಾ ವಕೀಲರು ಮತ್ತು ವಕೀಲರ ಸಂಘಗಳು ಸಹಕಾರ ನೀಡಬೇಕೆಂದು ಎಂದು ಅವರು ಕೋರಿದರು.

Leave a Reply

Your email address will not be published. Required fields are marked *

You may have missed