ಕೇಂದ್ರದ ಅನುದಾನಕ್ಕಾಗಿ BJP-JDS ಪಾದಯಾತ್ರೆ ನಡೆಸಿದ್ದರೆ ರಾಜ್ಯಕ್ಕೆ ಒಳಿತಾಗುತ್ತಿತ್ತು..!

Pralhd Joshi- R Ashok - Ramalinga Reddy

ಬೆಂಗಳೂರು: ಹಿಂದೆ ಹಾವು ಮುಂಗುಸಿಯಂತೆ ಕಚ್ಚಾಡುತ್ತಿದ್ದ ಬಿಜೆಪಿ-ಜೆಡಿಎಸ್ ನಾಯಕರು ಇದೀಗ ಪಾದಯಾತ್ರೆ ರಾಜಕಾರಣ ಮಾಡುತ್ತಿರುವ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಇವರ ಜಂಟಿ ಹೋರಾಟ ಕೇಂದ್ರದಿಂದ ಅನುದಾನ ತರುವ ವಿಚಾರಕ್ಕೆ ನಡೆದಿದ್ದರೆ ರಾಜ್ಯಕ್ಕೆ ಒಳಿತಾಗುತ್ತಿತ್ತು ಎಂದು ಪ್ರತಿಪಾದಿಸಿದ್ದಾರೆ.‌

ಬಿಜೆಪಿ-ಜೆಡಿಎಸ್ ಈ ಹಿಂದೆ ಹಾವು ಮುಂಗುಸಿಯ ಹಾಗೆ ಕಿತ್ತಾಡುತ್ತಿದ್ದರು, ಈಗ ಅಧಿಕಾರಕ್ಕಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಅವರು ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಸಂಸತ್ತಿನಲ್ಲೂ ಮಾತನಾಡುವುದಿಲ್ಲ, ಹೊರಗಡೆಯೂ ಮಾತನಾಡುವುದಿಲ್ಲ ಎಂದು ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಹಿಂದೆ ನರೇಂದ್ರ ಮೋದಿಯರು ದೇಶದ ಜನರಿಗೆ ಕೊಟ್ಟಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ, ಇದರ ವಿರುದ್ಧ ಎಲ್ಲಿಯೂ ಪ್ರತಿಭಟನೆ ಮಾಡದೇ ಈಗ ತಮ್ಮ ಭ್ರಷ್ಟಾಚಾರಗಳನ್ನು ಮರೆಮಾಚಿಕೊಳ್ಳುವುದಕ್ಕಾಗಿ ಭ್ರಷ್ಟಾಚಾರಿಗಳೇ ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ರಾಮಲಿಂಗ ರೆಡ್ಡಿ ವ್ಯಂಗ್ಯವಾಡಿದ್ದಾರೆ.

You may have missed