ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿ

by vijayendra

ಬೆಂಗಳೂರು: ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಇಂದು ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದೆ. ಬೆಂಗಳೂರು, ಮೈಸೂರು,ಬೀದರ್, ಬಳ್ಳಾರಿ ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಲೋಕಾಯುಕ್ತ ದಾಳಿ ಕೈಗೊಂಡಿದೆ. ರಾಜ್ಯದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಸಿಬ್ಬಂದಿ ಸುಮಾರು 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ದಾಳಿ ನಡೆಸಿದ್ದಾರೆ.

ಇದೇ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿಯಾಗಿದೆ.ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ಡಾ ಪ್ರಭಲಿಂಗ ಮಾನಕರ್ ಅವರ ಮನೆಗೆ ಲಗ್ಗೆ ಹಾಕಿರುವ ತನಿಖಾ ತಂಡ ದಾಖಲೆಗಳನ್ನು ಪರಿಶೀಲಿಸಿದೆ. ಯಾದಗಿರಿ ಡಿಎಚ್ ಓ ಆಗಿರುವ ಡಾ ಪ್ರಭುಲಿಂಗ್ ಮಾನಕರ್‌ ಅವರ ವಿರುದ್ದವೂ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ತಂಡ ಈ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ.

You may have missed