karnataka-high-Court2-300x194

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ರಾಜಕೀಯ ಪಕ್ಷಗಳ ಜಿದ್ದಾಜಿದ್ದಿನ ಅಖಾಡವಾಗಿ ಇಡೀ ದೇಶದ ಗಮನಸೆದಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹರಸಾಹಸಪಡುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಸಹಿತ ಕಮಲ ಪಕ್ಷದ ದಿಗ್ಗಜ ನಾಯಕರು ರಾಜ್ಯದಲ್ಲಿ ನಿರಂತರ ಪ್ರಚಾರದಲ್ಲಿ ತೊಡಗಿದ್ದಾರೆ.

ಇದೇ ವೇಳೆ, ಶನಿವಾರ ಮತ್ತು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಡೆಸಲುದ್ದೇಶಿಸಿರುವ ರೋಡ್ ಶೋ ಹೈವೋಲ್ಟೇಜ್ ಪ್ರಚಾರಕ್ಕೆ ಸಾಕ್ಷಿಯಾಗಲಿದೆ. ಆದರೆ ಈ ರೋಡ್ ಶೋ ಬಗ್ಗೆ ತಕಾರಾರು ಎದುರಾಗಿದೆ. ಈ ಸಂಬಂಧ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿದ್ಯಮಾನಗಳ ಕೇಂದ್ರಬಿಂದುವಾಗಿದೆ. ಆದರೆ ಈ ಅರ್ಜಿ ಕುರಿತಂತೆ ಆದೇಶ ಪ್ರಕಟಿಸಿರುವ ಹೈಕೋರ್ಟ್, ಮೋದಿ ರೋಡ್ ಶೋಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ

Leave a Reply

Your email address will not be published. Required fields are marked *

You may have missed