ಮಂಡಳಿ–ನಿಗಮಗಳ ಅಧ್ಯಕ್ಷರ ಪಟ್ಟಿಗೆ ಅಂತಿಮ ರೂಪ: ಶೀಘ್ರವೇ ಹೆಸರು ಘೋಷಣೆ

0
congress flag.2

ಬೆಂಗಳೂರು: ರಾಜ್ಯದ 29 ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರ ಪಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಗುರುವಾರ ಸಂಜೆ ಅಂತಿಮ ರೂಪ ನೀಡಿದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ ಈ ಪಟ್ಟಿಯ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

ಈ ಕುರಿತು ಸುಳಿವು ನೀಡಿರುವ ಸಿಎಂ ಸಿದ್ದರಾಮಯ್ಯ, “ನಾನು ಮತ್ತು ಶಿವಕುಮಾರ್‌ ನಮ್ಮ ಶಿಫಾರಸುಗಳನ್ನು ನೀಡಿದ್ದಾರೆವು. ಹೈಕಮಾಂಡ್‌ ಅಂತಿಮ ತೀರ್ಮಾನ ಕೈಗೊಳ್ಳಲಿದೆ” ಎಂದು ಸ್ಪಷ್ಟಪಡಿಸಿದರು.

ಆಗಸ್ಟ್ 11ರಂದು ನಡೆಯಲಿರುವ ವಿಧಾನಸಭೆಯ ಜಂಟಿ ಅಧಿವೇಶನಕ್ಕೂ ಮುನ್ನ ನಾಲ್ವರು ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನವಾಗುತ್ತದೆಯೇ ಎಂಬ ಪ್ರಶ್ನೆಗೆ ಅವರು, “ಬಹುಶಃ ಆಗಬಹುದು” ಎಂದು ಪ್ರತಿಕ್ರಿಯಿಸಿದರು. ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಪ್ರಕ್ರಿಯೆ ಮಧ್ಯೆ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರ ಹೆಸರಿನ ಕುರಿತು ಹೈಕಮಾಂಡ್‌ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿರುವುದರಿಂದ ಈಗಾಗಲೇ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಹೈಕಮಾಂಡ್‌ದಿಂದ ದಿನೇಶ್ ಅಮೀನ್ ಮಟ್ಟು, ಆರತಿ ಕೃಷ್ಣ, ರಮೇಶ್ ಬಾಬು ಹಾಗೂ ಡಿ.ಜಿ. ಸಾಗರ್ ಅವರನ್ನು ನಾಮನಿರ್ದೇಶಿಸಲು ಒಪ್ಪಿಗೆ ಸಿಕ್ಕಿತ್ತು. ಆದರೆ ಈಗ, ಮುಖ್ಯಮಂತ್ರಿಗಳು ಇದೇ ಪಟ್ಟಿಗೆ ಮುದ್ರೆ ಬಡಿಸುವ ಪ್ರಯತ್ನದಲ್ಲಿದ್ದಾರೆ ಎನ್ನಲಾಗಿದೆ.

ಇದೇವೇಳೆ, ಈ ಬಾರಿ ನಿಗಮ-ಮಂಡಳಿಗಳ ನೇಮಕದಲ್ಲಿ ಪಕ್ಷದ ನಿಷ್ಠಾವಂತರಿಗೆ ಆದ್ಯತೆ ನೀಡಬೇಕು ಎಂಬ ಒತ್ತಾಯಗಳು ಹೆಚ್ಚಾಗಿವೆ. “ಪಕ್ಷದ ಪರವಾಗಿ ಹೋರಾಟ ನಡೆಸುತ್ತಿರುವ ಕಾರ್ಯಕರ್ತರನ್ನು ಅಧಿಕಾರ ಹಾಗೂ ಸ್ಥಾನಮಾನ ನೀಡುವಲ್ಲಿ ಕಡೆಗಣನೆ ಆಗುತ್ತಿದೆ ಎಂಬ ಆರೋಪವನ್ನು ಸಿಎಂ ಕೂಡಾ ಗಂಭೀರವಾಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *