ಪಾಕ್ ಜೊತೆ ಯುದ್ಧಕ್ಕೆ ಸಿದ್ದ ಎಂದ ಜಮೀರ್ ಅಹ್ಮದ್; ‘ನಡೀರಿ ಹೋಗಿ ಬಿಡೋಣ’ ಎಂದ ಸಚಿವ

0
mla-zameer-ahmed-300x179

ಬೆಂಗಳೂರು: ಪಾಕಿಸ್ತಾನ ಎಂದಿಗೂ ನಮ್ಮ ಶತ್ರು. ಕೇಂದ್ರ ಸರ್ಕಾರ ಅವಕಾಶ ಕೊಟ್ಟರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗಲು ಸಿದ್ಧ ಎಂದು ಸಿದ್ದರಾಮಯ್ಯ ಆಪ್ತ, ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ.

ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾರತ-ಪಾಕಿಸ್ತಾನ ನಡುವಿನ ಬಿಗುವಿನ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಸಿದರು. ‘ನಾವು ಭಾರತೀಯರು, ಹಿಂದೂಸ್ತಾನಿಗಳು. ನಮಗೂ ಪಾಕಿಸ್ತಾನಕ್ಕೂ ಯಾವ ಸಂಬಂಧವೂ ಇಲ್ಲ. ಯುದ್ಧ ಮಾಡಬೇಕೆಂದರೆ ನಾನು ತಯಾರಾಗಿದ್ದೇನೆ. ಮಂತ್ರಿಯಾಗಿ ನನ್ನನ್ನು ಯುದ್ಧಕ್ಕೆ ಕಳುಹಿಸಿದರೆ ನಾನು ಹೋಗುತ್ತೇನೆ ಎಂದರು.

ಪಾಕಿಸ್ತಾನ ಯಾವಾಗಲೂ ನಮ್ಮ ಶತ್ರು…ಮೋದಿ, ಅಮಿತ್ ಶಾ ಮತ್ತು ಕೇಂದ್ರ ಸರ್ಕಾರ ನನಗೆ ಅವಕಾಶ ನೀಡಿದರೆ, ನಾನು ಯುದ್ಧಕ್ಕೆ ಹೋಗಲು ಸಿದ್ಧನಿದ್ದೇನೆ. ದೇಶಕ್ಕಾಗಿ ಯುದ್ಧ ಮಾಡಲು ನಾನು ರೆಡಿ.. ನಡೀರಿ ಹೋಗಿ ಬಿಡೋಣ ಎಂದು ಹೇಳಿದರು.

Leave a Reply

Your email address will not be published. Required fields are marked *

You may have missed