ಈ ಅವಧಿ ಪೂರ್ಣಗೊಳ್ಳುವ ವರೆಗೂ ನಾನೇ ಮುಖ್ಯಮಂತ್ರಿ’; ಸಿದ್ದರಾಮಯ್ಯ

0
Siddaramaiah

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆದಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರು ‘ಈ ಅವಧಿ ಪೂರ್ಣಗೊಳ್ಳುವ ವರೆಗೂ ನಾನೇ ಮುಖ್ಯಮಂತ್ರಿ’ ಎಂದು ಪ್ರತಿಕ್ರಿಯಿಸಿದ್ದಾರೆ.

ಸಂಡೂರಿನಲ್ಲಿ ಉಪಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಸುತ್ತೇನೆ ಎಂದರು. ಸಿದ್ದರಾಮಯ್ಯ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಬಿಜೆಪಿಯವರಿಗೆ ತಿಳಿದಿದೆ. ಹೀಗಾಗಿ ಸಿಬಿಐ, ಇಡಿ, ಐಡಿಯನ್ನು ಬಳಸಿಕೊಂಡು ನನ್ನನ್ನು ಮುಗಿಸಲು ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದರು.

ಇದೇ ವೇಳೆ, ನಾಯಕತ್ವ ಬದಲಾವಣೆ ವಿಚಾರವನ್ನು ಅವರು ತಳ್ಳಿಹಾಕಿದರು. ಉಪ ಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You may have missed