ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ ನೀಡುವುದಾಗಿ ಹೇಳಿದ ಡಿ.ಕೆ. ಶಿವಕುಮಾರ್

0
DKS Shivakumar

ಬೆಂಗಳೂರು: “ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ” ಎಂದು ಹೇಳಿದರು.

ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, “ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ” ಎಂದು ವ್ಯಂಗ್ಯವಾಡಿದರು.

Leave a Reply

Your email address will not be published. Required fields are marked *