ವಿಜಯಾನಂದ್ ಕಾಶಪ್ಪನವರ್‌ಗೆ ಸಚಿವ ಸ್ಥಾನ ನೀಡಲಿ: ಪಂಚಮಸಾಲಿ ಸಮಾಜದ ಒತ್ತಾಯ

0
Vijayanand-Kashappanavar-300x209-1

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಪಂಚಮಸಾಲಿ ಲಿಂಗಾಯಿತ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ನೀಡಬೇಕು ಹಾಗೂ ಯುವ ಶಾಸಕ ವಿಜಯಾನಂದ್ ಎಸ್. ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ–ಪಂಚಮಸಾಲಿ ಸಂಘ ಒತ್ತಾಯಿಸಿದೆ.

ನಗರದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ–ಪಂಚಮಸಾಲಿ ಸಂಘ ಹಾಗೂ ವಿಜಯಾನಂದ್ ಕಾಶಪ್ಪನವರ್ ಅಭಿಮಾನಿ ಬಳಗದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬೇಡಿಕೆ ಮುಂದಿರಿಸಲಾಯಿತು.

ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ಡಿಂಡೂರ ಮಾತನಾಡಿ, ರಾಜ್ಯದಲ್ಲಿ ಲಿಂಗಾಯಿತ ಪಂಚಮಸಾಲಿ ಸಮುದಾಯದ ಜನಸಂಖ್ಯೆ ಒಂದು ಕೋಟಿಗೂ ಅಧಿಕವಿದ್ದು, ಕೃಷಿ ಆಧಾರಿತ ಸಮುದಾಯವಾಗಿ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. ಆದಾಗ್ಯೂ, ಹಲವು ಸರ್ಕಾರಗಳಲ್ಲಿ ಸಮುದಾಯಕ್ಕೆ ಸಮರ್ಪಕ ಆದ್ಯತೆ ಸಿಕ್ಕಿಲ್ಲ ಎಂಬ ಬೇಸರವಿದೆ ಎಂದು ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ ಒಂದು ಉಪಮುಖ್ಯಮಂತ್ರಿ ಹುದ್ದೆ ಹಾಗೂ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಒತ್ತಾಯಿಸಿದ ಅವರು, ಯುವ ನಾಯಕ ವಿಜಯಾನಂದ್ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಹೊಸ ತಲೆಮಾರಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ವಿಜಯಾನಂದ್ ಕಾಶಪ್ಪನವರ್ ಅವರ ಕುಟುಂಬ ಕಾಂಗ್ರೆಸ್ ಪಕ್ಷದೊಂದಿಗೆ ದೀರ್ಘಕಾಲದ ನಂಟು ಹೊಂದಿದೆ. ಅವರ ತಂದೆ-ತಾಯಿ ಶಾಸಕರಾಗಿ ಸೇವೆ ಸಲ್ಲಿಸಿದ್ದು, ಪತ್ನಿ ವೀಣಾ ಕಾಶಪ್ಪನವರ್ ನಾಲ್ಕು ದಶಕಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದು ಅವರು ತಿಳಿಸಿದರು.

ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದ್ದು, ಉತ್ತಮ ಸ್ಪಂದನೆ ದೊರೆತಿದೆ. ಅಗತ್ಯವಿದ್ದರೆ ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಕೂಡ ಮನವಿ ಸಲ್ಲಿಸಲಾಗುವುದು ಎಂದು ಬಸವರಾಜ್ ಡಿಂಡೂರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಶಂಕರ ಬಿಸರಹಳ್ಳಿ, ಪ್ರಧಾನ ಕಾರ್ಯದರ್ಶಿ ಉಮಾಪತಿ, ಶಿವಕುಮಾರ್ ಬೆಳಗಾಂ, ವೀರೇಶ್, ಎಂ. ಸಿದ್ದೇಶ್ ಬೇಗೂರು, ಹೆಚ್.ಎನ್. ತಿಪ್ಪೇಸ್ವಾಮಿ ಹಾಗೂ ಪಿ.ಡಿ. ಶಿರೂರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

‘ತಲೈವರ್ 173’ಗೆ ಅಶ್ವಥ್ ಮಾರಿಮುತ್ತು ನಿರ್ದೇಶನ? ಆರ್‌ಕೆಎಫ್‌ಐ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ತಲೈವರ್ 173’ ಚಿತ್ರದ ನಿರ್ದೇಶಕರ ಕುರಿತು ಹೊಸ ಚರ್ಚೆ ಆರಂಭವಾಗಿದೆ. ನಟ ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ (ಆರ್‌ಕೆಎಫ್‌ಐ) ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಳಿಕ, ಈ ಚಿತ್ರವನ್ನು ಅವರೇ ನಿರ್ದೇಶಿಸಲಿದ್ದಾರೆ ಎಂಬ ವದಂತಿಗಳು ಸಿನಿ ವಲಯದಲ್ಲಿ ಹರಿದಾಡುತ್ತಿವೆ. ಆರ್‌ಕೆಎಫ್‌ಐ ತನ್ನ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ವಿಡಿಯೊ ಹಂಚಿಕೊಂಡು ಅಶ್ವಥ್ ಮಾರಿಮುತ್ತು ಅವರಿಗೆ ಶುಭಾಶಯ ಕೋರಿತ್ತು. ಈ ವಿಡಿಯೊದಲ್ಲಿನ ಕೆಲವು ಸೂಚನೆಗಳು ಅಭಿಮಾನಿಗಳಲ್ಲಿ ಹೊಸ ಕುತೂಹಲ ಮೂಡಿಸಿದ್ದು, ‘ತಲೈವರ್ 173’ ಚಿತ್ರದ ನಿರ್ದೇಶಕ ಅಶ್ವಥ್ ಅವರೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಈ ಚಿತ್ರವನ್ನು ಮೊದಲು ನಿರ್ದೇಶಕ ಸುಂದರ್ ಸಿ ನಿರ್ದೇಶಿಸಬೇಕಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಯೋಜನೆಯಿಂದ ಹಿಂದೆ ಸರಿದಿದ್ದರು. ಬಳಿಕ ನಿರ್ದೇಶಕ ಸಿಬಿ ಚಕ್ರವರ್ತಿ ಹೆಸರು ಕೇಳಿಬಂದಿದ್ದರೂ, ಅವರು ಸಹ ಯೋಜನೆಯಿಂದ ಹೊರಬಂದಿದ್ದಾರೆ ಎಂಬ ವರದಿಗಳು ಹರಿದಾಡಿದ್ದವು. ಈ ಬೆಳವಣಿಗೆಗಳ ನಡುವೆ ಅಶ್ವಥ್ ಮಾರಿಮುತ್ತು ಹೆಸರು ಮುನ್ನೆಲೆಗೆ ಬಂದಿದ್ದು, ಆರ್‌ಕೆಎಫ್‌ಐ ಪೋಸ್ಟ್ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ. ಆದರೆ ಈ ಕುರಿತು ನಿರ್ಮಾಣ ಸಂಸ್ಥೆ ಅಥವಾ ಚಿತ್ರತಂಡದಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಕಮಲ್ ಹಾಸನ್ ನಿರ್ಮಿಸುತ್ತಿರುವ ಹಾಗೂ ರಜನಿಕಾಂತ್ ಅಭಿನಯಿಸಲಿರುವ ‘ತಲೈವರ್ 173’ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದ್ದು, ನಿರ್ದೇಶಕರ ಆಯ್ಕೆ ಕುರಿತು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

‘ತಲೈವರ್ 173’ಗೆ ಅಶ್ವಥ್ ಮಾರಿಮುತ್ತು ನಿರ್ದೇಶನ? ಆರ್‌ಕೆಎಫ್‌ಐ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ತಲೈವರ್ 173’ ಚಿತ್ರದ ನಿರ್ದೇಶಕರ ಕುರಿತು ಹೊಸ ಚರ್ಚೆ ಆರಂಭವಾಗಿದೆ. ನಟ ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ (ಆರ್‌ಕೆಎಫ್‌ಐ) ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಳಿಕ, ಈ ಚಿತ್ರವನ್ನು ಅವರೇ ನಿರ್ದೇಶಿಸಲಿದ್ದಾರೆ ಎಂಬ ವದಂತಿಗಳು ಸಿನಿ ವಲಯದಲ್ಲಿ ಹರಿದಾಡುತ್ತಿವೆ. ಆರ್‌ಕೆಎಫ್‌ಐ ತನ್ನ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ವಿಡಿಯೊ ಹಂಚಿಕೊಂಡು ಅಶ್ವಥ್ ಮಾರಿಮುತ್ತು ಅವರಿಗೆ ಶುಭಾಶಯ ಕೋರಿತ್ತು. ಈ ವಿಡಿಯೊದಲ್ಲಿನ ಕೆಲವು ಸೂಚನೆಗಳು ಅಭಿಮಾನಿಗಳಲ್ಲಿ ಹೊಸ ಕುತೂಹಲ ಮೂಡಿಸಿದ್ದು, ‘ತಲೈವರ್ 173’ ಚಿತ್ರದ ನಿರ್ದೇಶಕ ಅಶ್ವಥ್ ಅವರೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಈ ಚಿತ್ರವನ್ನು ಮೊದಲು ನಿರ್ದೇಶಕ ಸುಂದರ್ ಸಿ ನಿರ್ದೇಶಿಸಬೇಕಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಯೋಜನೆಯಿಂದ ಹಿಂದೆ ಸರಿದಿದ್ದರು. ಬಳಿಕ ನಿರ್ದೇಶಕ ಸಿಬಿ ಚಕ್ರವರ್ತಿ ಹೆಸರು ಕೇಳಿಬಂದಿದ್ದರೂ, ಅವರು ಸಹ ಯೋಜನೆಯಿಂದ ಹೊರಬಂದಿದ್ದಾರೆ ಎಂಬ ವರದಿಗಳು ಹರಿದಾಡಿದ್ದವು. ಈ ಬೆಳವಣಿಗೆಗಳ ನಡುವೆ ಅಶ್ವಥ್ ಮಾರಿಮುತ್ತು ಹೆಸರು ಮುನ್ನೆಲೆಗೆ ಬಂದಿದ್ದು, ಆರ್‌ಕೆಎಫ್‌ಐ ಪೋಸ್ಟ್ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ. ಆದರೆ ಈ ಕುರಿತು ನಿರ್ಮಾಣ ಸಂಸ್ಥೆ ಅಥವಾ ಚಿತ್ರತಂಡದಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಕಮಲ್ ಹಾಸನ್ ನಿರ್ಮಿಸುತ್ತಿರುವ ಹಾಗೂ ರಜನಿಕಾಂತ್ ಅಭಿನಯಿಸಲಿರುವ ‘ತಲೈವರ್ 173’ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದ್ದು, ನಿರ್ದೇಶಕರ ಆಯ್ಕೆ ಕುರಿತು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.